Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಮಾಡಿದ ಆರೋಪಿ ಹುಡುಕಿ ಕೊಟ್ಟವರಿಗೆ 10 ಲಕ್ಷ ಬಹುಮಾನ ಘೋಷಣೆ..!

---Advertisement---

 

 

ಬೆಂಗಳೂರು: ಇಂದಿರಾನಗರದಲ್ಲಿರುವ ರಾಮೇಶ್ವರಂ ಸ್ಪೋಟ ಪ್ರಕರಣ ನಡೆದು ಆರು ದಿನಗಳು ಕಳೆದಿವೆ. ಆದರೂ ಆರೋಪಿ ಮಾತ್ರ ಪೊಲೀಸರಿಗೆ ಸಿಕ್ಕಿಲ್ಲ. ಸಖತ್ ಪ್ಲ್ಯಾನ್ ಮಾಡಿಕೊಂಡೆ ಆತ ಬಾಂಬ್ ಬ್ಲಾಸ್ಟ್ ಮಾಡಿದ್ದಾನೆ. ಎಲ್ಲಿಯೂ ತನ್ನ ಕುರುಹು ಕೂಡ ಸಿಗದಂತೆ ಮಾಡಿದ್ದಾನೆ. ಕಳೆದ ಐದು ದಿನಗಳಿಂದ ಕರ್‌ಅಟಕ ಪೊಲೀಸರು ಬೆಂಬಿಡದೆ ಹುಡುಕುತ್ತಿದ್ದಾರೆ. ಆದರೂ ಸುಳಿವು ಸಿಗುತ್ತಿಲ್ಲ. ಈ ಕೇಸನ್ನು ಎನ್ಐಎ ತಂಡ ಕೈಗೆತ್ತಿಕೊಂಡಿದ್ದು, ಇದೀಗ ಆರೋಪಿಯ ಹುಡುಕಾಟಕ್ಕೆ ಹೊಸ ದಾರಿ ಹುಡುಕಿದೆ.

ಶಂಕಿತ ಓಡಾಡಿದ ಸಿಸಿಟಿವಿ ವಿಡಿಯೋ ಅದಾಗಲೇ ರಿಲೀಸ್ ಆಗಿತ್ತು. ಬಾಂಬ್ ಇಟ್ಟವ ಎಲ್ಲಿಯೂ ತನ್ನ ಮುಖ ಕಾಣದಂತೆ ಕವರ್ ಮಾಡಿಕೊಂಡಿದ್ದ. ಹೀಗಾಗಿ ಈಗ ರಾಷ್ಟ್ರೀಯ ತನಿಖಾ ಸಂಸ್ಥೆ ಆತನ ಹುಡುಕಿಕೊಟ್ಟವರಿಗೆ ಬಹುಮಾನ ಘೋಷಣೆ ಮಾಡಿದೆ. ಬರೋಬ್ಬರಿ ಹತ್ತು ಲಕ್ಷ ರೂಪಾಯಿ ಘೋಷಣೆ ಮಾಡಿದೆ. ಆರೋಪಿಯ ಸುಳಿವು ಕೊಟ್ಟವರಿಗೆ ಹತ್ತು ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದ್ದು, ಆತನ ಸುಳಿವು ಸಿಕ್ಕಲ್ಲಿ 080-29510900 ಮತ್ತು 8904241100 ನಂಬರಿಗೆ ಮಾಹಿತಿ ನೀಡಲು ಸೂಚನೆ ನೀಡಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಮೇಶ್ವರಂ ಕೆಫೆಯಲ್ಲಿ ಯಾವಾಗಲೂ ಸಿಕ್ಕಾಪಟ್ಟೆ ಜನ ಇರುತ್ತಾರೆ. ಅಲ್ಲಿನ ತಿಂಡಿ, ಊಟಕ್ಕೆ ಜನ ಮನಸೋತಿದ್ದಾರೆ. ಹೀಗಾಗಿ ಸದಾ ಜನಜಂಗುಳಿಯಿಂದ ಕೂಡಿರುತ್ತದೆ. ಜನ ಹೆಚ್ಚಾಗಿರುವ ಜಾಗವನ್ನೇ ನೋಡಿ ಬ್ಲಾಸ್ಟ್ ಮಾಡಲಾಗಿದೆ. ಹೊಟೇಲ್ ಬೆಳೆದ ರೀತಿಗೆ, ಆ ಯಶಸ್ಸಿಗೆ ಯಾರಾದರೂ ಈ ರೀತಿ ಮಾಡಿದರಾ, ಅಥವಾ ಜನರು ಹೆಚ್ಚಾಗಿದ್ದ ಕಾರಣ ಬ್ಲಾಸ್ಟ್ ಮಾಡಿದರಾ ಯಾವ ಮಾಹಿತಿಯೂ ಇನ್ನು ಪಕ್ಕಾ ಆಗಿಲ್ಲ. ಆರೋಪಿ ಸಿಕ್ಕ ಬಳಿಕವಷ್ಟೇ ಇದಕ್ಕೆಲ್ಲಾ ಒಂದು ಅಂತ್ಯ ಸಿಗಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment