Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಭದ್ರಾಮೇಲ್ದಂಡೆ ಯೋಜನೆ | ಬೇಡಿಕೆ ಈಡೇರಿಸದಿದ್ದರೆ ಬಿಜೆಪಿ ವಿರುದ್ಧ ಮತ | 33 ದಿನಗಳಿಂದ ನಡೆಯುತ್ತಿದ್ದ ರೈತರ ಧರಣಿ ಅಂತ್ಯ

---Advertisement---

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ. ಮಾ.07 : ಭದ್ರಾಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಮಂಜೂರು ಮಾಡಿರುವ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವಂತೆ ಕಳೆದ 33 ದಿನಗಳಿಂದ ಜಿಲ್ಲಾ ಪಂಚಾಯಿತಿ ಎದುರು ನಡೆಸುತ್ತಿದ್ದ ಧರಣಿಯನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ತಿಳಿಸಿದರು.

ಧರಣಿ ಸ್ಥಳದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 1974 ರಲ್ಲಿದ್ದಂತ ಬರಗಾಲ ಈಗ ಮತ್ತೆ ಎದುರಾಗಿದೆ. ಭದ್ರಾಮೇಲ್ದಂಡೆ ವಿಚಾರವಾಗಿ ಸರ್ಕಾರದ ಗಮನ ಸೆಳೆಯುತ್ತಲೆ ಬರುತ್ತಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜವಾಬ್ದಾರಿಯಿಂದ ನಡೆದುಕೊಂಡಿದ್ದರೆ ಇಷ್ಟೊತ್ತಿಗೆ ಜಿಲ್ಲೆಗೆ ನೀರು ಹರಿಯುತ್ತಿತ್ತು. ಕೆರೆಗಳು ತುಂಬಿರುತ್ತಿದ್ದವು. ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವಂತೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿಗೆ ಮನವಿ ಕೊಟ್ಟಿದ್ದೇವೆ. ಆಡಳಿತಾತ್ಮಕ ಹಾಗೂ ಕಾನೂನು ಸಮಸ್ಯೆಗಳನ್ನು ಬಗೆಹರಿಸಿ ಮಳೆಗಾಲ ಮುಗಿಯುವುದರೊಳಗೆ ನೀರಾವರಿ ಯೋಜನೆಯನ್ನು ಮುಗಿಸಬೇಕು. ಚುನಾವಣೆ ಘೋಷಣೆಯಾದ ಒಂದು ವಾರದವರೆಗೆ ನೋಡುತ್ತೇವೆ. ನಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸದಿದ್ದರೆ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಬಿಜೆಪಿ. ವಿರುದ್ದ ಮತ ಚಲಾಯಿಸುವಂತೆ ಜಿಲ್ಲೆಯಾದ್ಯಂತ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತೇವೆಂದು ಹೇಳಿದರು.

ಇಲ್ಲಿಯವರೆಗೂ ನಮ್ಮ ಧರಣಿಗೆ 2 ಲಕ್ಷ ಹದಿನೆಂಟು ಸಾವಿರದ 900 ರೂ.ಗಳು ಬಂದಿದೆ. ಒಂದು ಲಕ್ಷ 84 ಸಾವಿರದ 547 ರೂ.ಗಳು ಖರ್ಚಾಗಿದೆ. 34 ಸಾವಿರದ 353 ರೂ.ಗಳು ಉಳಿದಿರುವುದನ್ನು ಮುಂದಿನ ಹೋರಾಟಕ್ಕೆ ಬಳಸುತ್ತೇವೆ. ಹದಿನಾಲ್ಕು ಪ್ಯಾಕೆಟ್ ಅಕ್ಕಿ ಕೂಡ ಮಿಕ್ಕಿದೆ. ಕೆಲವರು ಅವಲಕ್ಕಿ, ಎಣ್ಣೆ ಕೊಟ್ಟಿದ್ದಾರೆ. ನಮಗೆ ಬೆಂಬಲಿಸಿದ ಎಲ್ಲರಿಗೂ ಪ್ರಶಂಸನಾ ಪತ್ರಗಳನ್ನು ನೀಡಬೇಕೆಂದಿದ್ದೇವೆಂದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಡಿ.ಎಸ್.ಹಳ್ಳಿ, ರೈತ ಮುಖಂಡರುಗಳಾದ ಆರ್.ಬಿ.ನಿಜಲಿಂಗಪ್ಪ, ಅಪ್ಪರಸನಹಳ್ಳಿ ಬಸವರಾಜಪ್ಪ, ಮಂಜುನಾಥ್, ರಾಜಶೇಖರ್, ಸತೀಶ್, ಮಲ್ಲೇಶಿ, ತಿಪ್ಪೇಸ್ವಾಮಿ, ನಿರಂಜನಮೂರ್ತಿ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...