Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಚ್ 10 ರಂದು ಕರುನಾಡ ವಿಜಯಸೇನೆಯಿಂದ ಕನ್ನಡ ಹಬ್ಬ | ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

---Advertisement---

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 07 : ಪ್ರತಿ ವರ್ಷದಂತೆ ಈ ಬಾರಿಯು ಕರುನಾಡ ವಿಜಯಸೇನೆಯಿಂದ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಮಾ. 10 ರಂದು ಸಂಜೆ 5-40 ಕ್ಕೆ ಕನ್ನಡ ಹಬ್ಬ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಖ್ಯಾತ ಜನಪದ ಗಾಯಕ ಡಾ.ಮಹದೇವಸ್ವಾಮಿ ಮಳವಳ್ಳಿ ಇವರಿಗೆ ರಾಜಾವೀರ ಮದಕರಿನಾಯಕ ಪ್ರಶಸ್ತಿ, ಲೇಖಕಿ ಬಾ.ಹ. ರಮಾಕುಮಾರಿ ಇವರಿಗೆ ಒನಕೆ ಓಬವ್ವ ಪ್ರಶಸ್ತಿ ಹಾಗೂ ಇಪ್ಪತ್ತು ಸಾವಿರ ರೂ.ಗಳ ನಗದು ನೀಡಿ ಗೌರವಿಸಲಾಗುವುದು. ಸರಿಗಮಪ ಖ್ಯಾತಿಯ ಗಾಯಕರು ಹಾಗೂ ಗಿಚ್ಚಿಗಿಲಿಗಿಲಿ ತಂಡದಿಂದ ಮನೋರಂಜನಾ ಕಾರ್ಯಕ್ರಮವಿರುತ್ತದೆ.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಯವರಿಗೆ ಕೋಟೆ ನಾಡಿನ ರಾಜಕೀಯ ಭೀಷ್ಮ, ಡಿ.ಡಿ.ಪಿ.ಐ. ಕೆ.ರವಿಶಂಕರ್‍ರೆಡ್ಡಿಗೆ ಕೋಟೆನಾಡಿನ ಶಿಕ್ಷಣ ಕ್ರಾಂತಿಕಾರಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪನವರಿಗೆ ಕೋಟೆ ನಾಡಿನ ರಾಜಕೀಯ ಸುಪುತ್ರ ಬಿರುದು ನೀಡಿ ಸನ್ಮಾನಿಸಲಾಗುವುದು. ಇದಲ್ಲದೆ ಸಮಾಜದ ಕೊಳೆ ತೊಳೆಯುವವರು, ಪಾದರಕ್ಷೆ ಹೊಲಿಯುವವರು, ಕ್ಷೌರಿಕರು, ಅನಾಥ ಶವಗಳನ್ನು ಸಂಸ್ಕಾರ ಮಾಡುವವರು, ಬಟ್ಟೆ ಇಸ್ತ್ರಿ ಮಾಡುವವರು, ಪೌರ ಕಾರ್ಮಿಕರು, ಆಸ್ಪತ್ರೆಗಳಲ್ಲಿ ಶವ ಪೋಸ್ಟ್ ಮಾರ್ಟಂ ನಡೆಸುವವರನ್ನು ಗುರುತಿಸಿ ಗೌರವಿಸಲಾಗುವುದೆಂದು ಹೇಳಿದರು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕನ್ನಡದ ಹಬ್ಬವನ್ನು ಸವಿಯುವಂತೆ ಕೆ.ಟಿ.ಶಿವಕುಮಾರ್ ವಿನಂತಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಅಣ್ಣಪ್ಪ, ನಿಸಾರ್ ಅಹಮದ್, ಉಪಾಧ್ಯಕ್ಷೆ ರತ್ನಮ್ಮ, ಪ್ರದೀಪ್, ಜಗದೀಶ್ ಪಿ. ಸುರೇಶ್, ವಿದ್ಯಾರ್ಥಿ ಘಟಕದ ಅಖಿಲೇಶ್, ಮಣಿಕಂಠ, ಹರೀಶ್ ಕುಮಾರ್, ಸಂತೋಷ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment