Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುದ್ದಹನುಮೇಗೌಡರ ಎದುರು ಸ್ಪರ್ಧಿಸ್ತಾರಾ ವಿ ಸೋಮಣ್ಣ : ತುಮಕೂರು ಅಭ್ಯರ್ಥಿಗಳು ಇವರೇನಾ..?

Facebook
Twitter
Telegram
WhatsApp

ತುಮಕೂರು: ಲೋಕಸಭಟ ಚುನಟವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ದಿನಾಂಕ ಅನೌನ್ಸ್ ಆಗುವುದೊಂದೆ ಬಾಕಿ. ಅದಕ್ಕಾಗಿಯೇ ಟಿಕೆಟ್ ಆಕಾಂಕ್ಷಿಗಳು ಅದಾಗಲೇ ಜನರ ಬಳಿಗೆ ಓಡಾಟ ನಡೆಸುತ್ತಿದ್ದಾರೆ. ಸಮಸ್ಯೆಗಳನ್ನು ಕೇಳುತ್ತಿದ್ದಾರೆ. ಇನ್ನು ಯಾವ ಪಕ್ಷದಲ್ಲೂ ಅಭ್ಯರ್ಥಿಗಳ ಫೈನಲ್ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಇದರ ಮಧ್ಯೆ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಸಚಿವ ಕೆ ಎನ್ ರಾಜಣ್ಣ ಅವರು ತಿಳಿಸಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಮಾತನಾಡಿದ ಕೆ ಎನ್ ರಾಜಣ್ಣ, ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಭಾಗದಲ್ಲಿ ಕಾಂಗ್ರೆಸ್ ನ ಎಸ್ ಪಿ ಮುದ್ದಹನುಮೇಗೌಡ ಅವರು ಬಿಜೆಪಿಯ ವಿ ಸೋಮಣ್ಣ ಅವರೊಂದಿಗೆ ಕಣಕ್ಕೆ ಇಳಿಯಲಿದ್ದಾರೆ. ವಿ ಸೋಮಣ್ಣ ಅವರಿಗೆ ಬಿಜೆಪಿ ತುಮಕೂರು ಟಿಕೆಟ್ ನೀಡಲಿದೆ ಎಂಬ ಮಾಹಿತಿ ನನಗೆ ಇದೆ. ಕಾಂಗ್ರೆಸ್ ಮುದ್ದಹನುಮೇಗೌಡರನ್ನು ಕಣಕ್ಕೆ ಇಳಿಸಲಿದೆ‌ ಎಂದಿದ್ದಾರೆ.

 

ಇದೇ ವೇಳೆ ದಲಿತ ಸಿಎಂ ಬಗ್ಗೆಯೂ ಮಾತನಾಡಿ, ಎಚ್ ಸಿ ಮಹದೇವಪ್ಪ ಅವರು ದಲಿತ ಸಿಎಂ ಬೇಕು ಎಂಬ ಬೇಡಿಕೆ ಮುಂದಿಡುವುದರಲ್ಲಿ ಯಾವುದೇ ತಪ್ಪಿಲ್ಲ. ಮುಖ್ಯಮಂತ್ರಿ ಬದಲಾವಣೆಯಾದರೆ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಲಿ. ದಲಿತರನ್ನು ಸಿಎಂ ಮಾಡಲಿ ಎಂದು ಇಷ್ಟು ವರ್ಷಗಳ ಕಾಲ ಒತ್ತಾಯ ಮಾಡುತ್ತಲೆ ಬಂದಿದ್ದೀವಿ ಎಂದಿದ್ದಾರೆ.

ಇನ್ನು ತುಮಕೂರು ಲೋಕಸಭೆಗೂ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷ ಇನ್ನು ಅಭ್ಯರ್ಥಿಗಳ ಹೆಸರನ್ನು ಫೈನಲ್ ಆಗಿ ಹೇಳಿಲ್ಲ. ಆದರೆ ವಿಧಾನಸಭೆಯಲ್ಲಿ ಸೋತ ಸೋಮಣ್ಣ ಅವರು ತುಮಕೂರು ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದು, ತುಮಕೂರಿನಲ್ಲಿ ಸಂಚಾರ ನಡೆಸುತ್ತಿದ್ದಾರೆ. ಆದರೆ ತುಮಕೂರಿನಲ್ಲಿ ಬಿಜೆಪಿ ನಾಯಕರೇ ವಿ ಸೋಮಣ್ಣ ಅವರ ಸ್ಪರ್ಧೆಗೆ ನಿರಾಕರಣೆ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

error: Content is protected !!