Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಬೇಡರಕಣ್ಣಪ್ಪ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ವಿಶೇಷ ಪೂಜೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 08  : ಕೆಳಗೋಟೆಯಲ್ಲಿರುವ ಶಿವಭಕ್ತ ಬೇಡರಕಣ್ಣಪ್ಪ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.

ಶಿವನಿಗೆ ಪ್ರಿಯವಾದ ಬಿಲ್ವಪತ್ರೆ, ತುಳಸಿ, ಮಲ್ಲಿಗೆ, ಕನಕಾಂಬರ, ಸೇವಂತಿಗೆ, ಸುಗಂಧರಾಜ ಹೂವು ಹಾಗೂ ಹಾರಗಳಿಂದ ಸಿಂಗರಿಸಲಾಗಿತ್ತು. ಬೆಳಗಿನಿಂದ ರಾತ್ರಿಯವರೆಗೆ ನೂರಾರು ಭಕ್ತರು ಧಾವಿಸಿ ಬೇಡರಕಣ್ಣಪ್ಪನಿಗೆ ಭಕ್ತಿ ಸಮರ್ಪಿಸಿದರು.
ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.

ಕೆಳಗೋಟೆಯ ಬೇಡರ ಕಣ್ಣಪ್ಪ ದೇವಸ್ಥಾನದಿಂದ ಮಹಾಶಿವರಾತ್ರಿಯ ಪ್ರಯುಕ್ತ ಶುಕ್ರವಾರ ನಗರದಲ್ಲಿ ಮೆರವಣಿಗೆ ನಡೆಸಲಾಯಿತು.
ಅಡ್ಡ ರಸ್ತೆಯಿಂದ ಆರಂಭಗೊಂಡ ಮೆರವಣಿಗೆ ಮುನ್ಸಿಪಲ್ ಕಾಲೋನಿ, ಎಸ್ಪಿ.ಕಚೇರಿ ರಸ್ತೆ, ಆಕಾಶವಾಣಿ ಮುಂಭಾಗದಿಂದ ದೇವಸ್ಥಾನ ತಲುಪಿತು.

ಸಾರೋಟಿನಲ್ಲಿ ಶಿವನ ಫೋಟೋದೊಂದಿಗೆ ಹೊರಟ ಮೆರವಣಿಗೆಯಲ್ಲಿ ಮೈಸೂರಿನವರು ಚಂಡೆ ಮೃದಂಗ ಬಾರಿಸುತ್ತಿದ್ದರು. ಮೆರವಣಿಗೆಯುದ್ದಕ್ಕೂ ಕೆಳಗೋಟೆಯ ಯುವಕರು ಕುಣಿದು ಕುಪ್ಪಳಿಸಿ ಸಂಭ್ರಮ ಪಟ್ಟರು.

ಬೇಡರಕಣ್ಣಪ್ಪ ದೇವಸ್ಥಾನ ಸಮಿತಿ ಅಧ್ಯಕ್ಷ ಪಾಪನಾಯಕ, ನಗರಸಭೆ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಕೆ.ಸುಬ್ರಮಣ್ಯಂ, ಉದ್ಯಮಿ ಮಹೇಶ್, ಮಂಜುನಾಥ್, ಶಿವರಾಜ್, ಚಂದ್ರಶೇಖರ್, ಶ್ರೀನಿವಾಸ್, ಸೋಮಶೇಖರ್, ಮಾರುತಿ, ಸುರೇಶ್ ಇನ್ನು ಅನೇಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!