Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನೀಲಕಂಠೇಶ್ವರಸ್ವಾಮಿ ಮತ್ತು ಪಾತಾಳೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಅಲಂಕಾರ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 08 : ನಗರದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ಶುಕ್ರವಾರ ಕಣ್ಣು ಕೋರೈಸುವಂತೆ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.

ಬಗೆ ಬಗೆಯ ಹೂವು ಹಾರ, ಬಿಲ್ವಪತ್ರೆ ಹಾಗೂ ತುಳಸಿ ಮಾಲೆಯಿಂದ ಅಲಂಕರಿಸಿ ಪೂಜಿಸಲಾಯಿತು.
ಗಾಯತ್ರಿ ಭವನ ಸಮೀಪದಿಂದ ಸರತಿ ಸಾಲಿನಲ್ಲಿ ಬಂದು ಶಿವನ ದರ್ಶನ ಪಡೆಯಲು ಭಕ್ತರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಶಿವರಾತ್ರಿಯ ಜಾಗರಣೆ ನಿಮಿತ್ತ ರಾತ್ರಿಯಲ್ಲಿ ಅತಿಯಾದ ರಷ್ ಇರುತ್ತದೆಂದು ಕೆಲವರು ಸಂಜೆಯೆ ದರ್ಶನ ಪಡೆದರು. ದೇವಸ್ಥಾನದ ಮುಂಭಾಗ ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿತ್ತು.

ದೇವಸ್ಥಾನದ ಆಸುಪಾಸಿನಲ್ಲಿ ಬಿಲ್ವಪತ್ರೆ, ಹೂವು ಹಣ್ಣುಗಳ ಮಾರಾಟ ಬಿರುಸಿನಿಂದ ಕೂಡಿತ್ತು. ಮಹಿಳೆ, ಮಕ್ಕಳು, ವಯೋವೃದ್ದರಿಂದ ಹಿಡಿದು ಎಲ್ಲರೂ ದೇವಸ್ಥಾನದೊಳಗೆ ಸಾಲಿನಲ್ಲಿ ನಿಂತು ನೀಲಕಂಠೇಶ್ವನಿಗೆ ಶ್ರದ್ದಾಭಕ್ತಿಯನ್ನು ಸಮರ್ಪಿಸಿದರು. ಕೆಲವರು ಮೊಬೈಲ್‍ಗಳಿಂದ ನೀಲಕಂಠೇಶ್ವರನ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದರು.

ಚಿತ್ರದುರ್ಗ : ಕೋಟೆ ರಸ್ತೆಯಲ್ಲಿರುವ ಪಾತಾಳೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.
ಬಗೆ ಬಗೆಯ ಹೂವು ಹಾಗೂ ಹಾರಗಳಿಂದ ಅಲಂಕರಿಸಿ ಪೂಜಿಸಲಾಯಿತು. ಸಂಜೆಯಾಗುತ್ತಿದ್ದಂತೆ ಮಧ್ಯರಾತ್ರಿಯವರೆಗೂ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಪಾತೇಳೇಶ್ವರನ ದರ್ಶನ ಪಡೆದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...