Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಂದನ್ ಶೆಟ್ಟಿ ಏನೋ ಹೇಳ್ತಿದ್ದಾರೆ ನೋಡಿ

Facebook
Twitter
Telegram
WhatsApp

ಕೆಲವೊಂದು ಸಿನಿಮಾಗಳ ಟೈಟಲ್ ಕ್ಯಾಚಿಯಾಗಿರುತ್ತೆ. ಕೇಳುವುದಕ್ಕೆ ಅಟೆನ್ಶನ್ ಕ್ರಿಯೇಟ್ ಮಾಡುತ್ತವೆ. ಆ ರೀತಿಯ ಟೈಟಲ್ ನಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಎಂಬ ಟೈಟಲ್ ಕೂಡ ಸಖತ್ತಾಗಿದೆ. ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಕಡೆಯಿಂದ ಪ್ರೇಕ್ಷಕರಿಗೊಂದು ಗಿಫ್ಟ್ ಒಂದು ಸಿಕ್ಕಿದೆ.

ಈ ಹಿಂದೆ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆಗೊಂಡಿತ್ತು. ಇದೀಗ ನಾಯಕನಾಗಿ ನಟಿಸಿರುವ ಚಂದನ್ ಶೆಟ್ಟಿಯ ವಿಆರ್ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಅನ್ನು ನಿವೇದಿತಾ ಗೌಡ ಬಿಡುಗಡೆಗೊಳಿಸಿದ್ದಾರೆ!
ಅರುಣ್ ಅಮುಕ್ತ ನಿರ್ದೇಶನದ ಈ ಚಿತ್ರದಲ್ಲಿ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆಂಬ ವಿಚಾರ ಈ ಜಾಹೀರಾಗಿತ್ತು. ಚಂದನ್ ಯಾವ ಗೆಟಪ್ಪಿನಲ್ಲಿ ಕಾಣಿಸಿಕೊಂಡಿದ್ದಾರೆಂಬ ವಿಚಾರವನ್ನು ಮಾತ್ರ ಗೌಪ್ಯವಾಗಿಡಲಾಗಿತ್ತು. ಇದೀಗ ವಿಆರ್ ಪೋಸ್ಟರ್ ಮೂಲಕ ಚಂದನ್ ಶೆಟ್ಟಿಯ ಪಾತ್ರ ಪರಿಚಯವಾಗಿದೆ. ಚಂದನ್ ಇಲ್ಲಿ ಕಾಣಿಸಿಕೊಂಡಿರುವ ಗೆಟಪ್ಪಿನ ಸುತ್ತ ಒಟ್ಟಾರೆ ಕಥೆಯ ಬಗ್ಗೆ ಒಂದಷ್ಟು ಕುತೂಹಲ ಮೂಡಿಕೊಂಡಿದೆ.

ಹಂತ ಹಂತವಾಗಿ, ಅತ್ಯಂತ ಕ್ರಿಯಾಶೀಲವಾಗಿ ಈ ಸಿನಿಮಾದತ್ತ ಪ್ರೇಕ್ಷಕರನ್ನು ಸೆಳೆಯುವ ಕಾರ್ಯ ನಡೆಯುತ್ತಾ ಬಂದಿದೆ. ಅದರ ಫಲವಾಗಿಯೇ ಇದೀಗ ಈ ಸಿನಿಮಾ ಕಥೆಯ ಸುತ್ತ ಒಂದಷ್ಟು ಕುತೂಹಲ ಮೂಡಿಕೊಂಡು, ಚರ್ಚೆಗಳೂ ನಡೆಯುತ್ತಿವೆ. ಈ ವಿಆರ್ ಪೋಸ್ಟರ್ (ವರ್ಚುವಲ್ ರಿಯಾಲಿಟಿ ಪೋಸ್ಟರ್ ಅಂತೂ ಈಗಿನ ಜನರೇಷನ್ನಿನ ಹುಡುಗರಿಗೆ ನೇರಾನೇರ ಕನೆಕ್ಟಾಗುವಂತಿದೆ. ಚಂದನ್ ಶೆಟ್ಟಿಯ ಗೆಟಪ್ಪು ಕೂಡಾ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಜೊತೆಗೆ ಇದು ಸೈಬರ್ ಫಂಕ್ ಕಥೆಯನ್ನು ಒಳಗೊಂಡಿರಬಹುದಾ? ಈ ಹಿಂದೆ ಬಿಡುಗಡೆಗೊಂಡಿದ್ದ ಪೋಸ್ಟರಿನಲ್ಲಿ ಕೈಯಲ್ಲಿ ಹಾಕಿ ಸ್ಟಿಕ್ ಹಿಡಿದಿದ್ದ ನಾಲಕ್ಕು ಪಾತ್ರಗಳು ಎದುರುಗೊಂಡಿದ್ದವು.

ಚಂದನ್ ಪಾತ್ರ ಕೈಯಲ್ಲಿ ವಿಆರ್ ಅನ್ನು ಹಿಡಿದುಕೊಂಡಿದೆ. ಇದೆಲ್ಲವನ್ನೂ ಕಂಡ ಪ್ರೇಕ್ಷಕರಿಗೆ ಇದೊಂದು ಈ ಕಾಲಮಾನದ ಆವೇಗ ಬಚ್ಚಿಟ್ಟುಕೊಂಡಿರುವ ಕಥೆಯೆಂಬ ವಿಚಾರವನ್ನು ದಾಟಿಸಿದೆ. ನಿಖರವಾಗಿ ಹೇಳಬೇಕೆಂದರೆ, ಈ ವಿಆರ್ ಪೋಸ್ಟರ್ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರತ್ತ ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗುವಂತಿದೆ.

ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಶ್ರೀಕಾಂತ್ ಜಿ ಕಶ್ಯಪ್, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭಣವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಸಂಗೀತ ನಿರ್ದೇಶನ ಮಾಡಲಿದ್ದಾರೆ. ವಿಶೇಷವೆಂದರೆ, ಇದುವರೆಗೂ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಚಂದನ್ ಶೆಟ್ಟಿ ಪಾತ್ರವನ್ನು ಗೌಪ್ಯವಾಗಿಡಲಾಗಿದೆ. ಶಿವರಾತ್ರಿಯಂದು ಚಂದನ್ ಶೆಟ್ಟಿ ಪಾತ್ರ ಪರಿಚಯ ಮಾಡಲಿರೋ ಮೋಷನ್ ಪೋಸ್ಟರ್ ಲಾಂಚ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!