Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳೆದ ಬಾರಿ ಬಿಎಸ್ವೈ ವಿರುದ್ಧ ಈ ಬಾರಿ ರಾಘವೇಂದ್ರ ವಿರುದ್ಧ : ಗೀತಾ ಸ್ಪರ್ಧೆಗೆ ಶಿವಣ್ಣ ಏನಂದ್ರು..?

Facebook
Twitter
Telegram
WhatsApp

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಯಂತೆ ಗೀತಾ ಶಿವರಾಜ್ ಕುಮಾರ್ ಅವರಿಗೆ ಟಿಕೆಟ್ ಸಿಕ್ಕಿದೆ. ಕಾಂಗ್ರೆಸ್ ನ ಮೊದಲ ಪಟ್ಟಿ ರಿಲೀಸ್ ಆಗಿದ್ದು, ಅದರಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಗೀತಾ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಹಿಂದೆ ಯಡಿಯೂರಪ್ಪ ಅವರ ವಿರುದ್ಧ ನಿಂತಿದ್ದರು. ಬಹುಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಇದೀಗ ಈ ಬಾರಿಯೂ ಟಿಕೆಟ್ ಸಿಕ್ಕಿದ್ದು, ಬಿವೈ ರಾಘವೇಂದ್ರ ಅವರ ವಿರುದ್ಧ ಸ್ಪರ್ಧೆ ಮಾಡುತ್ತಿದ್ದಾರೆ.

 

ಪತ್ನಿಯ ಸ್ಪರ್ಧೆ ಬಗ್ಗೆ ಇಂದು ಶಿವಣ್ಣ ಮಾತನಾಡಿದ್ದು, ಕಳೆದ ಹತ್ತು ವರ್ಷದ ಹಿಂದೆ ಸ್ಪರ್ಧೆ ಮಾಡಿದ್ದರು ಎನ್ನುವುದಕ್ಕಿಂತ ಅನುಭವ ಬಹಳ ಮುಖ್ಯ. ಸೆಲ್ಫ್ ಕಾನ್ಫಿಡೆನ್ಸ್ ಬಹಳ ಮುಖ್ಯವಾಗುತ್ತದೆ. ಗೀತಾ ಅವರ ಪತಿಯಾಗಿ ಅವರಿಗೆ ಬೆಂಬಲವಾಗಿರಬೇಕಾದದ್ದು ನಮ್ಮ ಕರ್ತವ್ಯ. ನಾವೂ ಹೇಳುತ್ತೇವೆ ಹೆಣ್ಣು ಎತ್ತರವಾಗಿ ಬೆಳೆಯಬೇಕು ಅಂತ. ಎಲ್ಲಾ ರಂಗದಲ್ಲೂ ಹೆಣ್ಣು ಮಕ್ಕಳಿದ್ದಾರೆ. ನಮಗೆ ಜನ್ಮ ಕೊಡುವುದೇ ತಾಯಿ. ಅವರಿಗೆ ಗೌರವ ಕೊಡಬೇಕು. ಅವರ ಆಸೆಯನ್ನು ಈಡೇರಿಸಬೇಕಾಗಿರುವುದು ನಮ್ಮ ಕರ್ತವ್ಯ.

 

ನಾನು ಗೀತಾರ ಆಸೆ ಈಡೇರಿಸುತ್ತಾ, ಅವರಿಗೆ ಬೆಂಬಲವಾಗಿ ನಿಲ್ಲುತ್ತೇನೆ. ನಾನು ಗೀತಾಗೆ ಹೇಳುವುದು ಒಂದೇ ಆತ್ಮವಿಶ್ವಾಸ ಇರಲಿ. ಆದರೆ ಅತಿಯಾದ ಆತ್ಮವಿಶ್ವಾಸ ಬೇಡ ಎಂದು. ಹತ್ತು ವರ್ಷ ಎಂಬುದು ಇಲ್ಲಿ ಗಣನೆಗೆ ಬರುವುದಿಲ್ಲ. ಅನುಭವ ಅಷ್ಟೇ ಇಲ್ಲಿ ವರ್ಕೌಟ್ ಆಗುವುದು. ಕಾಂಗ್ರೆಸ್ ನಿಂದ ಗೀತಾ ಶಿವರಾಜ್ ಕುಮಾರ್ ನಿಲ್ಲುತ್ತಿದ್ದಾರೆ. ಬಿಜೆಪಿಯಿಂದ ರಾಘವೇಂದ್ರ ಎನ್ನುತ್ತಿದ್ದಾರೆ. ಒಬ್ಬರಿಗೆ ಒಬ್ಬ ರು ಎದುರು ನಿಲ್ಲಲೇಬೇಕು ಅಲ್ವಾ. ಅದರಲ್ಲಿ ಏನಿದೆ ವಿಶೇಷತೆ. ನಾನು ಕೂಡ 100% ಜೊತೆಗೆ ಇರುತ್ತೇನೆ. ಪತಿಯಾಗಿ ಅದು ನನ್ನ ಕರ್ತವ್ಯ. ಸಿನಿಮಾ ಹಾಗೂ ಪತ್ನಿಗೆ ಬೆಂಬಲ ಎರಡನ್ನು ಸಮಾನಾಗಿ ನಿಭಾಯಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!