Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಡ್ಯದಿಂದಾನೇ ಸುಮಲತಾ ಸ್ಪರ್ಧೆ, ಅಮ್ಮನಿಂದ ದೂರವಾಗೋಕೆ ಆಗುತ್ತಾ ಅಂದ್ರು ದರ್ಶನ್..!

Facebook
Twitter
Telegram
WhatsApp

ಮಂಗಳೂರು: ಮಂಡ್ಯ ಚುನಾವಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕುತೂಹಲದ ಸ್ಪಾಟ್ ಆಗಿದೆ. ದಳಪತಿಗಳು ಮಂಡ್ಯ ಬಿಡಲ್ಲ, ಸುಮಲತಾ ಕೂಡ ಕಾಂಪ್ರೂಮೈಸ್ ಆಗಲ್ಲ. ಹೀಗಾಗಿ ಮಂಡ್ಯದತ್ತ ಎಲ್ಲರ ಚಿತ್ತ ನೆಟ್ಟಿದೆ. ಇದರ ನಡುವೆ ಸುಮಲತಾ ಮಂಡ್ಯದಿಂದಾನೇ ಸ್ಪರ್ಧೆ ಮಾಡುವುದಾಗಿ ಹೇಳಿದ್ದು, ಬಿಜೆಪಿಯಿಂದ ಟಿಕೆಟ್ ಸಿಗುವ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಹೈವೋಲ್ಟೇಜ್ ಕಣವಾಗಿತ್ತು. ಆ ಸಂದರ್ಭದಲ್ಲಿ ದರ್ಶನ್ ಹಾಗೂ ಯಶ್ ಮಂಡ್ಯ ನೆಲಕ್ಕೆ ಎಂಟ್ರಿ ಕೊಟ್ಟಿದ್ದರು. ಸುಮಲತಾ ಅಮ್ಮನ ಪರವಾಗಿ ನಿಂತಿದ್ದರು. ಈ ಬಾರಿಯೂ ದರ್ಶನ್ ಹಾಗೂ ಯಶ್ ಬರ್ತಾರಾ ಪ್ರಚಾರಕ್ಕೆ ಎಂದು ಇತ್ತಿಚೆಗಷ್ಟೇ ಸುಮಲತಾ ಅವರನ್ನು ಕೇಳಿದ್ದಾಗ, ಕರೆಯುವುದು ಸರಿಯಲ್ಲ. ಬಂದರೆ ತುಂಬಾ ಖುಷಿ ಎಂದಿದ್ದರು. ಇದೀಗ ದರ್ಶನ್, ಈ ಬಾರಿಯೂ ಅಮ್ಮನ ಜೊತೆಗ ಇರ್ತೀನಿ, ಪ್ರಚಾರ ಮಾಡುತ್ತೀನಿ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಮಂಗಳೂರಿನಲ್ಲಿ ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿ, ದರ್ಶನ ಪಡೆದ ಬಳಿಕ ಮಾತನಾಡಿದ ನಟ ದರ್ಶನ್, ಮಂಗಳೂರಿಗೆ ಸುಮಾರು ಸಲ ಬಂದಿದ್ದೇನೆ. ಆದರೆ ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿರಲಿಲ್ಲ. ಹಾಗೇ ನೋಡಿಕೊಂಡು ಹೋಗೋಣಾ ಅಂತ ಬಂದೆ ಎಂದಿದ್ದಾರೆ. ಇದೇ ವೇಳೆ ಸುಮಲತಾ ಅವರ ಬೆಂಬಲದ ಬಗ್ಗೆ ಮಾತನಾಡಿ, ಅವರು ಅಮ್ಮ. ಅಮ್ಮನೆ. ನಾನು ಅವರೊಂದಿಗೇನೆ ಇರೋದು. ಬೇರೆ ಪಕ್ಷದಿಂದ ಸ್ಪರ್ಧೆ ಮಾಡ್ತಾರೆ ಅಂದ್ರೆ ಅವರಿಂದ ದೂರವಾಗೋದಕ್ಕೆ ಆಗುತ್ತಾ..? ಕಳೆದ ಬಾರಿಯಂತೆ ಈ ಬಾರಿಯೂ ಅಮ್ಮನ ಪರ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಹಾಗಾದ್ರೆ ಈ ಬಾರಿ ಮಂಡ್ಯ ರಣಕಣದಲ್ಲಿ ದಾಸನ ಹವಾ ಜೋರಾಗಿಯೇ ಇರಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

error: Content is protected !!