ಮಂಗಳೂರು: ಮಂಡ್ಯ ಚುನಾವಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕುತೂಹಲದ ಸ್ಪಾಟ್ ಆಗಿದೆ. ದಳಪತಿಗಳು ಮಂಡ್ಯ ಬಿಡಲ್ಲ, ಸುಮಲತಾ ಕೂಡ ಕಾಂಪ್ರೂಮೈಸ್ ಆಗಲ್ಲ. ಹೀಗಾಗಿ ಮಂಡ್ಯದತ್ತ ಎಲ್ಲರ ಚಿತ್ತ ನೆಟ್ಟಿದೆ. ಇದರ ನಡುವೆ ಸುಮಲತಾ ಮಂಡ್ಯದಿಂದಾನೇ ಸ್ಪರ್ಧೆ ಮಾಡುವುದಾಗಿ ಹೇಳಿದ್ದು, ಬಿಜೆಪಿಯಿಂದ ಟಿಕೆಟ್ ಸಿಗುವ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಹೈವೋಲ್ಟೇಜ್ ಕಣವಾಗಿತ್ತು. ಆ ಸಂದರ್ಭದಲ್ಲಿ ದರ್ಶನ್ ಹಾಗೂ ಯಶ್ ಮಂಡ್ಯ ನೆಲಕ್ಕೆ ಎಂಟ್ರಿ ಕೊಟ್ಟಿದ್ದರು. ಸುಮಲತಾ ಅಮ್ಮನ ಪರವಾಗಿ ನಿಂತಿದ್ದರು. ಈ ಬಾರಿಯೂ ದರ್ಶನ್ ಹಾಗೂ ಯಶ್ ಬರ್ತಾರಾ ಪ್ರಚಾರಕ್ಕೆ ಎಂದು ಇತ್ತಿಚೆಗಷ್ಟೇ ಸುಮಲತಾ ಅವರನ್ನು ಕೇಳಿದ್ದಾಗ, ಕರೆಯುವುದು ಸರಿಯಲ್ಲ. ಬಂದರೆ ತುಂಬಾ ಖುಷಿ ಎಂದಿದ್ದರು. ಇದೀಗ ದರ್ಶನ್, ಈ ಬಾರಿಯೂ ಅಮ್ಮನ ಜೊತೆಗ ಇರ್ತೀನಿ, ಪ್ರಚಾರ ಮಾಡುತ್ತೀನಿ ಎಂಬುದನ್ನು ಒಪ್ಪಿಕೊಂಡಿದ್ದಾರೆ.
ಮಂಗಳೂರಿನಲ್ಲಿ ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿ, ದರ್ಶನ ಪಡೆದ ಬಳಿಕ ಮಾತನಾಡಿದ ನಟ ದರ್ಶನ್, ಮಂಗಳೂರಿಗೆ ಸುಮಾರು ಸಲ ಬಂದಿದ್ದೇನೆ. ಆದರೆ ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿರಲಿಲ್ಲ. ಹಾಗೇ ನೋಡಿಕೊಂಡು ಹೋಗೋಣಾ ಅಂತ ಬಂದೆ ಎಂದಿದ್ದಾರೆ. ಇದೇ ವೇಳೆ ಸುಮಲತಾ ಅವರ ಬೆಂಬಲದ ಬಗ್ಗೆ ಮಾತನಾಡಿ, ಅವರು ಅಮ್ಮ. ಅಮ್ಮನೆ. ನಾನು ಅವರೊಂದಿಗೇನೆ ಇರೋದು. ಬೇರೆ ಪಕ್ಷದಿಂದ ಸ್ಪರ್ಧೆ ಮಾಡ್ತಾರೆ ಅಂದ್ರೆ ಅವರಿಂದ ದೂರವಾಗೋದಕ್ಕೆ ಆಗುತ್ತಾ..? ಕಳೆದ ಬಾರಿಯಂತೆ ಈ ಬಾರಿಯೂ ಅಮ್ಮನ ಪರ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಹಾಗಾದ್ರೆ ಈ ಬಾರಿ ಮಂಡ್ಯ ರಣಕಣದಲ್ಲಿ ದಾಸನ ಹವಾ ಜೋರಾಗಿಯೇ ಇರಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











