Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೀಪಿಕಾ ದಾಸ್ ಅದ್ದೂರಿ ಆರತಕ್ಷತೆ : ಯಾರೆಲ್ಲಾ ಬಂದಿದ್ರು..? ಗುಟ್ಟಾಗಿ ಆದ ಮದುವೆ ಬಗ್ಗೆ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ನಾಗಿಣಿ ಧಾರಾವಾಹಿ ಹಾಗೂ ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ಇಂದು ಅದ್ದೂರಿಯಾಗಿ ರಿಸೆಪ್ಶನ್ ಮಾಡಿಕೊಂಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಯಾರಿಗೂ ಮಾಹಿತಿಯೇ ತಿಳಿಸದೆ ಮದುವೆಯಾಗಿದ್ದರು. ಕುಟುಂಬಸ್ಥರ ಸಮ್ಮುಖದಲ್ಲಷ್ಟೇ ಮದುವೆ ನಡೆದಿತ್ತು. ದೀಪಿಕಾ ದಾಸ್ ಈ ರೀತಿ ಗುಟ್ಟಾಗಿ ಮದುವೆಯಾಗಿದ್ದೇಕೆ ಎಂಬುದು ಎಲ್ಲರಿಗೂ ಪ್ರಶ್ನೆಯಾಗಿ ಕಾಡಿತ್ತು. ಹುಡುಗ ದುಬೈ ಎಂದೇ ಹೇಳಲಾಗಿತ್ತು. ಕನ್ನಡ ಬರುತ್ತಾ ಎಂಬೆಲ್ಲಾ ಚರ್ಚೆಗಳು ಹುಟ್ಟುಕೊಂಡಿದ್ದವು‌. ಇದೀಗ ದೀಪಿಕಾ ದಾಸ್ ಪತಿಯ ಬಗ್ಗೆ ಇದೀಗ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದೆ.

 

ಇಂದು ದೀಪಿಕಾ ದಾಸ್ ಹಾಗೂ ದೀಪಕ್ ಅದ್ದೂರಿ ಆರತಕ್ಷತಾ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಬಿಗ್ ಬಾಸ್ ಸ್ಪರ್ಧಿಗಳು ಕೂಡ ಭಾಗಿಯಾಗಿ, ನವದಂಪತಿಗೆ ಶುಭ ಹಾರೈಸಿದ್ದಾರೆ. ಸ್ಯಾಂಡಲ್ ವುಡ್ ನ ಹಲವು ಕಲಾವಿದರು ಕೂಡ ಆಗಮಿಸಿದ್ದರು.

ಇನ್ನು ದೀಪಿಕಾ ದಾಸ್ ಎಲ್ಲಾ ಪ್ರಶ್ನೆಗಳಿಗೂ ತೆರೆ ಎಳೆದಿದ್ದಾರೆ. ‘ನಾನು ಮದುವೆಯಾಗಿರುವ ಹುಡುಗ ಅಪ್ಪಟ ಕನ್ನಡದ ಹುಡುಗ, ಗೌಡ್ರ ಹುಡುಗ. ನಾನು ವಿದೇಶಿಗರನ್ನೆಲ್ಲಾ ನೋಡಲ್ಲ. ಇಲ್ಲೆ ಆರ್ ಆರ್ ನಗರದ ಹುಡುಗ. ಮದುವೆಯನ್ನ ಗುಟ್ಟಾಗಿ ಏನು ಆಗಿಲ್ಲ. ಮೂರ್ನಾಲ್ಕು ತಿಂಗಳ ತಯಾರಿ ಅದು. ನಾನು ದೀಪಕ್ ಹಲವು ವರ್ಷಗಳಿಂದ ಪರಿಚಯ ಇದ್ದೆವು. ಕಳೆದ ವರ್ಷ ಮದುವೆ ವಿಚಾರ ಅಂತ ಬಂದಾಗ, ಮೊದಲು ಒಂದು ವರ್ಷ ಡೇಟ್ ಮಾಡೊಣಾ. ಇಬ್ಬರಿಗೂ ಹೊಂದಾಣಿಕೆಯಾಗುತ್ತೆ ಎಂದರೆ ಮದುವೆಯಾಗೋಣಾ ಎಂದು ತೀರ್ಮಾನ ಮಾಡಿದೆವು. ಅದರಂತೆ ಇಬ್ಬರಿಗೂ ಹೊಂದಾಣಿಕೆ ಆಯ್ತು. ಮದುವೆ ಯಾಕೆ ತಡ ಮಾಡಬೇಕು ಅಂತ ಮದುವೆ ಆದೆವು’ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕೋರಿದ ಎಸ್ ಆರ್ ಎಸ್ ಹೆರಿಟೇಜ್ ಶಾಲೆ

  ಸುದ್ದಿಒನ್, ಚಿತ್ರದುರ್ಗ, ಮೇ. 20 : ಎಸ್ ಆರ್ ಎಸ್ ಹೆರಿಟೇಜ್ ಶಾಲೆಯು 2024-25 ರ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು ಬೇಸಿಗೆ ರಜಾ ಮುಗಿಸಿಕೊಂಡು ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

error: Content is protected !!