Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಕ್ತಿಯು ವ್ಯಕ್ತಿಯಲ್ಲಿ ಶಕ್ತಿ ಮತ್ತು ಶ್ರದ್ಧೆ ವೃದ್ಧಿಸುವ ಸಾಧನ : ಶ್ರೀಶಿವಲಿಂಗಾನಂದ ಸ್ವಾಮೀಜಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.11 :  ವ್ಯಕ್ತಿಯ ಬದುಕು ಸಾರ್ಥಕವಾಗಲು ಭಕ್ತಿಯು ಸತ್ಪಥವನ್ನು ತೋರಿಸುತ್ತದೆ. ಸಂಕಷ್ಟಗಳನ್ನು ಸಹಿಸಿಕೊಂಡು ಸಾಧನೆ ಮಾಡಲು ಪ್ರೇರಕಶಕ್ತಿಯಾಗಿರುವ ಭಕ್ತಿಯು ವ್ಯಕ್ತಿಯಲ್ಲಿ ಶಕ್ತಿ ಮತ್ತು ಶ್ರದ್ಧೆ ವೃದ್ಧಿಸುವ ಸಾಧನವೆಂದು ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಅವರು ಅಭಿಪ್ರಾಯಪಟ್ಟರು.

ಬೆಳಗಟ್ಟದಲ್ಲಿ ಭಾನುವಾರ ನಡೆದ ಶ್ರೀ ಗುರುಕರಿಬಸವೇಶ್ವರಜ್ಜಯ್ಯ ಸ್ವಾಮಿಯ 23ನೇ ಮಹಾರಥೋತ್ಸವದ ನಿಮಿತ್ತ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು  ಶ್ರೀ ಗುರುಕರಿಬಸವೇಶ್ವರಜ್ಜಯ್ಯಸ್ವಾಮಿ ಮಠದ ಪೀಠಾಧ್ಯಕ್ಷರಾದ ಅಮ್ಮ ಮಹದೇವಮ್ಮ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಖ್ಯಾತಕವಿ ಯುಗಧರ್ಮ ರಾಮಣ್ಣ ಅವರು ಮಾತಾಡಿ ಮಹದೇವಮ್ಮ ಅವರು ಮಹಾತಾಯಿ. ಸಾವಿರಾರು ಭಕ್ತರ ಸಂಕಷ್ಟಗಳನ್ನು ಪರಿಹರಿಸುವ ನಡೆದಾಡುವ ಮಾತಾಡುವ ದೇವರು. ಬ್ರಹ್ಮಜ್ಞಾನಿ ಮಹದೇವಮ್ಮ ಅವರ ಆಧ್ಯಾತ್ಮಿಕ ಸಾಧನೆ ಅಪೂರ್ವವಾದುದು ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾದ ಪಾಪೇಶ್ ನಾಯಕ, ಲಿಂಗಂ ಶ್ರೀನಿವಾಸ್, ಪ್ರಾಣೇಶ್, ತಿಮ್ಮಪ್ಪ, ರುದ್ರಮುನಿ, ಅಶ್ವತ್ಥ ನಾರಾಯಣ, ಎರ್ರಿಸ್ವಾಮಿ ಮೊದಲಾದವರು ಭಾಗವಹಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment