Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಚ್ 13 ಮತ್ತು 14 ರಂದು ತುರುವನೂರು ಅರಳಿಗನೂರು ಶರಣ ಶ್ರೀ ಬಸಪ್ಪತಾತನವರ 58 ನೇ ಪುಣ್ಯಾರಾಧನೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್,12 : ತಾಲ್ಲೂಕಿನ
ತುರುವನೂರಿನಲ್ಲಿ ಅರಳಿಗನೂರು ಶರಣ ಶ್ರೀ ಬಸಪ್ಪತಾತನವರ 58 ನೇ ಪುಣ್ಯಾರಾಧನೆ ಕಾರ್ಯಕ್ರಮ ಮಾರ್ಚ್ 13 ಮತ್ತು 14 ರಂದು ನಡೆಯಲಿದೆ.

ಮಾರ್ಚ್ 13 ರಂದು ಮಧ್ಯಾಹ್ನ 3-00 ಗಂಟೆಗೆ ತಾತನವರ ಭಾವ ಚಿತ್ರವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿ ಮೆರವಣಿಗೆಯನ್ನು ಭಜನಾಮೇಳ, ಕರಡಿ ಮೇಳ, ವಿವಿಧ ಮಂಗಳ ವಾದ್ಯಗಳೊಂದಿಗೆ ಕಳಸ ಕನ್ನಡಿಗಳೊಂದಿಗೆ ಗಂಗಾಪೂಜೆ ನೆರವೇರಿಸಿ ಮಳೆಗಾಗಿ ತಪಸ್ಸು ಮಾಡಿದ ಶ್ರೀ ಗಂಗಾಧರ ದೇವಸ್ಥಾನದಿಂದ ಕುಂಭ ಕಳಸಗಳೊಂದಿಗೆ ಮೆರವಣಿಗೆ ವೈಭವದಿಂದ ಗ್ರಾಮದ ಮುಖ್ಯ ಬೀದಿಗಳಲ್ಲಿ ನಡೆಯುತ್ತದೆ. ಅದೇ ದಿನ ರಾತ್ರಿ ಭಜನಾ ತಂಡಗಳ ಸತ್ಸಂಗದವರಿಂದ ಭಜನೆ ಕಾರ್ಯಕ್ರಮ ನಡೆಯುತ್ತದೆ.

ಮಾರ್ಚ್ 14 ನೇ ಗುರುವಾರ ಉದಯ ಪೂರ್ವ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ತಾತನವರ ಶಿಲಾಮೂರ್ತಿಗೆ ಮಹಾಭಿಷೇಕ ಪೂಜೆ ನಂತರ ಶ್ರೀ ಸಿದ್ಧಿವಿನಾಯಕನಿಗೆ ಮತ್ತು ಐತಿಹಾಸಿಕ ಶ್ರೀ ರಾಮಲಿಂಗೇಶ್ವರ ಲಿಂಗಕ್ಕೆ ವಿಶೇಷ ಪೂಜೆ, ಮಹಾ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗವಾಗುತ್ತದೆ.
ಮಧ್ಯಾಹ್ನ 12-00 ಗಂಟೆಗೆ “ಮಹಾದಾಸೋಹ”
ನಡೆಯುತ್ತದೆ.

ದಾಸೋಹ ದಾನಿಗಳು: ವಿ. ಗುರುಮಲ್ಲಪ್ಪ, ಕ್ಲಾಸ್ 1 ಕಂಟ್ರಾಕ್ಟರ್, ತುರುವನೂರು

ಮೆರವಣಿಗೆಯ ವಿವಿಧ ಮಂಗಳ ವಾದ್ಯಗಳ ಪ್ರಾಯೋಜಕರು:
ಶ್ರೀಮತಿ ಅನಸೂಯಮ್ಮ ನಾಗೇಂದ್ರ ಗೌಡರು, ತುರುವನೂರು

(ಅಭಿಷೇಕದ ಸೇವಾಕರ್ತರು : ಶ್ರೀಮತಿ ಸರ್ವಮಂಗಳಮ್ಮ ಚಿದಾನಂದಪ್ಪ, ಜಿ, ತುರುವನೂರು.

ಸಮಸ್ತ ಭಕ್ತರಿಗೂ ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀ ಗುರು ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಶ್ರೀ ಶ್ರೀ ಗುರು ಶಿವಶರಣ ಶಿವಯೋಗಿ ಶ್ರೀ ಮನ್ನಿರಂಜನ ಪ್ರಣವಸ್ವರೂಪಿ ಶ್ರೀ ಬಸಪ್ಪತಾತನವರ ಮಠದ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment