ಕಾಮಿಡಿ ಪಾತ್ರಗಳ ಮನರಂಜಿಸಿದ್ದ ತುಕಾಲಿ ಸಂತೋಷ್ ಬಿಗ್ ಬಾಸ್ ಸೀಸನ್ 10 ಸ್ಪರ್ಧಿಯಾಗಿಯೂ ಜನ ಮನ ಗೆದ್ದಿದ್ದರು. ತಮ್ಮ ಹಾಸ್ಯದಿಂದಾನೇ ಫಿನಾಲೆ ತಲುಪಿದ್ದರು. ಬಳಿಕ ಕಲರ್ಸ್ ಕನ್ನಡದ ರಿಯಾಲಿಟಿ ಶೋ ಮೂಲಕವೇ ತಮ್ಮ ಜರ್ನಿ ಮುಂದುವರೆಸಿದ್ದಾರೆ. ಈ ಎಲ್ಲಾ ಯಶಸ್ಸಿನ ಅಲೆಯಲ್ಲಿರುವಾಗಲೇ ಇತ್ತೀಚೆಗೆ ಹೊಸ ಕಾರೊಂದನ್ನು ಖರೀದಿ ಮಾಡಿದ್ದರು. ಆ ಕಾರಿನ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಕಿಯಾ ಶೋರೂಮಿನ ಗಾಡಿ ಅದಾಗಿತ್ತು. ಇದೀಗ ಅದೇ ಕಾರು ಅಪಘಾತಕ್ಕೆ ಈಡಾಗಿದೆ.
ತುಕಾಲಿ ಸಂತೋಷ್ ಕಾರು ಗುದ್ದಿ ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿರುವುದು ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ತುಕಾಲಿ ಸಂತೋಷ್ ಅವರು ಕಾರಿನಲ್ಲಿ ಬರುವಾಗ ಈ ಘಟನೆ ನಡೆದಿದೆ.
ತುಕಾಲಿ ಸಂತೋಷ್ ಮೂಲತಃ ಹೊಳೆನರಸೀಪುರದವರು. ಯಾವುದೋ ಕೆಲಸಕ್ಕೆಂದು ತುಮಕೂರಿಗೆ ಹೋಗಿದ್ದರು. ತುಮಕೂರಿನಿಂದ ಹೊಳೆನರಸೀಪುರಕ್ಕೆ ಬರುವ ಹಾದಿಯಲ್ಲಿ ಈ ಘಟನೆ ನಡೆದಿದೆ. ತುಮಕೂರಿನಿಂದ ಕುಣಿಗಲ್ ತಲುಪಿದ್ದಾರೆ. ಅಲ್ಲಿಂದ ಕುರುಡಿಹಳ್ಳಿಗೆ ತೆರಳುತ್ತಿದ್ದಾಗ, ಆಟೋ ಚಾಲಕನಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸೇರಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತುಕಾಲಿ ಸಂತೋಷ್ ಕಾರು ಯಾರು ಓಡಿಸುತ್ತಿದ್ದರು, ಅಪಘಾತವಾಗಲೂ ಆದ ಪ್ರಮಾದವೇನು ಎಂಬುದರ ಯಾವ ಮಾಹಿತಿಯೂ ಇನ್ನು ಲಭ್ಯವಾಗಿಲ್ಲ. ಆಟೋ ಚಾಲಕ ಮಾತ್ರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಮೊಕದ್ದಮೆ ದಾಖಲಿಸಕೊಂಡು ತನಿಖೆ ನಡೆಸುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















