Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಷ್ಟ ಎಂದು ಬಂದ ಹೆಣ್ಣು ಮಗುವಿಗೆ ಹಣದ ಸಹಾಯವನ್ನು ಮಾಡಿದ್ದೆ : ಬಿಎಸ್ ಯಡಿಯೂರಪ್ಪ ಸ್ಪಷ್ಟನೆ

---Advertisement---

 

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಸಹಾಯ ಕೇಳಲು ಹೋದಾಗ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಈ ದೂರಿನ ಸಂಬಂಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನ್ನ ಮೇಲೆ ಯಾರೋ ಹೆಣ್ಣು ಮಗಳು ದೂರು ಕೊಟ್ಟಿದ್ದಾರೆ ಅಂತ ಗೊತ್ತಾಯ್ತು. ಕಳೆದ ಒಂದೂವರೆ ತಿಂಗಳ ಹಿಂದೆ ಯಾರೋ ತಾಯಿ ಮಗಳು ಬಂದಿದ್ದರು. ಅನೇಕ ಸಾರಿ ಬಂದಿದ್ದರು ಹತ್ತಿರ ಸೇರಿಸಿರಲಿಲ್ಲ. ಒಮ್ಮೆ ಕಣ್ಣೀರು ಹಾಕುತ್ತಿದ್ದರು. ಆಗ ಮನೆಯೊಳಗೆ ಕರೆಸಿ ಸಮಸ್ಯೆ ಏನು ಅಂತ ಕೇಳಿದೆ. ಆ ತಾಯಿ ನನಗೆ ಅನ್ಯಾಯವಾಗಿದೆ, ಅದು ಇದು ಅಂತ ಹೇಳಿದ್ದರು. ಆಗ ಪೊಲೀಸ್ ಕಮಿಷನರ್ ದಯಾನಂದ್ ಅವರಿಗೆ ಕರೆ ಮಾಡಿ, ಈ ಹೆಣ್ಣು‌ ಮಗುವಿಗೆ ಸಹಾಯ ಮಾಡಿ ಎಂದು ಹೇಳಿದೆ.

ಆ ಹೆಣ್ಣು ಮಗು ನನ್ನ ಮೇಲೆಯೇ ಆ ಸಮಯದಲ್ಲಿ ಒಂಥರ ಮಾತನಾಡುವುದಕ್ಕೆ ಶುರು ಮಾಡಿದರು. ಆಗ ಇದು ಯಾಕೋ ಆರೊಇಗ್ಯ ಸರಿ ಇದ್ದಂತೆ ಕಾಣಲ್ಲ ಎಂದು ಪೊಲೀಸ್ ಕಮಿಷನರ್ ಕರೆ ಮಾಡಿ ಕಳುಹಿಸಿಕೊಟ್ಟೆ. ಅವತ್ತು ಕಷ್ಟ ಎಂದಾಗ ಸ್ವಲ್ಪ ಹಣದ ಸಹಾಯವನ್ನು ಮಾಡಿದೆ. ಆದರೆ ಈಗ ಈ ರೀತಿಯಾದಂತ ಬೆಳವಣಿಗೆಯಾಗಿದೆ. ಇದನ್ನೆಲ್ಲಾ ನಾನು ನಿರೀಕ್ಷೆ ಮಾಡಿರಲಿಲ್ಲ. ಕಷ್ಟ ಎಂದು ಬಂದವರಿಗೆ ಸಹಾಯ ಮಾಡುವುದಕ್ಕರ ಹೋದರೆ ಏನಾಗುತ್ತದೆ ನೋಡಿ ಎಂದು ನಗುತ್ತಲೇ ಯಡಿಯೂರಪ್ಪ ಅವರು ಉತ್ತರ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...