Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ : ಟಿಕೆಟ್ ಕೈ ತಪ್ಪಿದ್ದಕ್ಕೆ ಮಂಗಳಾ ಅಂಗಡಿ ಹೇಳಿದ್ದೇನು..?

Facebook
Twitter
Telegram
WhatsApp

ಬೆಳಗಾವಿ: ಟಿಕೆಟ್ ಸಿಗದ ಕಾರಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಲೋಕಸಭಾ ಆಫರ್ ನೀಡಿತ್ತು. ಹೀಗಾಗಿ ಕಾಂಗ್ರೆಸ್ ತೊರೆದು‌ ಮತ್ತೆ ಬಿಜೆಪಿಗೆ ಬಂದರು. ಹುಬ್ಬಳ್ಳಿ-ಧಾರಾವಾಡ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಲೋಕಸಭಾ ಚುನಾವಣೆಯಲ್ಲಿ ಅದು ಸಾಧ್ಯವಾಗಲಿಲ್ಲ. ಇದೀಗ ಬೆಳಗಾವಿಯಲ್ಲಿ ಟಿಕೆಟ್ ಸಿಕ್ಕಿದೆ ಎನ್ನಲಾಗಿದೆ. ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಗೆ ನಿಲ್ಲುವ ಆಸಕ್ತಿ‌ ಇರಲಿಲ್ಲ. ಮಂಗಳಾ ಅಂಗಡಿ ಅವರ ಕುಟುಂಬ ಆಕಾಂಕ್ಷಿಯಾಗಿದ್ದರು. ಆದರೆ ಇದೀಗ ಜಗದೀಶ್ ಶೆಟ್ಟರ್ ಹೆಸರು ಫೈನಲ್ ಆಗಿದೆ.

ಈ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವೆಉ ಪ್ರತಿಕ್ರಿಯೆ ನೀಡಿ, ಶೆಟ್ಟರ್ ಅವರಿಗೆ ಬೆಳಗಾವಿಯಿಂದ ಸ್ಪರ್ಧೆ ಮಾಡುವುದಕ್ಕೆ ಇಷ್ಟವಿರಲಿಲ್ಲ. ಆದರೆ ಕೊನೆಯಲ್ಲಿ ಬೆಳಗಾವಿ ಸ್ಪರ್ಧೆಗೆ ಅವರು ಒಪ್ಪಿಕೊಂಡಿದ್ದಾರೆ. ಗೆಲ್ಲುತ್ತಾರೆ ಎಂಬ ಭರವಸೆ ಇದೆ ಎಂದಿದ್ದಾರೆ.

 

ಇದೇ ವೇಳೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಂಗಳಾ ಅಂಗಡಿ ಕೂಡ ಮಾತನಾಡಿದ್ದಾರೆ. ಎರಡನೇ ಪಟ್ಟಿಯಲ್ಲಿಯೂ ನಮ್ಮ ಕುಟುಂಬದ ಹೆಸರು ಬಂದಿರಲಿಲ್ಲ. ಹೀಗಾಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದೆಹಲಿಗೆ ಹೋಗಿದ್ದೆ. ಆದರೆ ಅಷ್ಟರಲ್ಲಾಗಲೇ ಬೆಳಗಾವಿಯ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಿದ್ದರು ಎಂಬುದು ತಿಳಿಯಿತು. ಹೀಗಾಗಿ ವಾಪಾಸ್ ಬಂದೆವು. ಶೆಟ್ಟರ್ ಮೊದಲು ನಿಂತುಕೊಳ್ಳಲ್ಲ ಎಂದೇ ಹೇಳಿದ್ದರು. ಬಳಿಕ ಹೈಕಮಾಂಡ್ ನಾಯಕರು ಹೇಳಿದ ಬಳಿಕ ಓಕೆ ಎಂದಿದ್ದಾರೆ. ಶೆಟ್ಟರ್ ನಿಂತುಕೊಂಡರೆ ಅವರ ಜೊತೆಗೆ ಕೆಲಸ ಮಾಡುತ್ತೇನೆ. ಟಿಕೆಟ್ ಮಿಸ್ ಆದಾಗ ಆರಂಭದಲ್ಲಿ ಈ ರೀತಿ ಆಗುವುದು ಸಹಜ. ಈಗಾಗಲೇ ಶಾಸಕರು, ಕಾರ್ಯಕರ್ತರ ಜೊತೆಗೆ ಶೆಟ್ಟರ್ ಅವರು ಮಾತನಾಡಿದ್ದಾರೆ ಎಂದು ಶೆಟ್ಟರ್ ಗೋ ಬ್ಯಾಕ್ ಅಭಿಯಾನದ ಬಗ್ಗೆ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ಅಕ್ಷಯ ತೃತೀಯ : 100 ವರ್ಷಗಳ ಬಳಿಕ ಗಜಕೇಸರಿ ಯೋಗ

ಅಕ್ಷಯ ತೃತೀತ ಎಂದರೆ ಹೆಣ್ಣು ಮಕ್ಕಳಿಗೆ ಬಲು ಪ್ರೀತಿ.‌ಈ ದಿನದಂದು ಚಿನ್ನ, ಬೆಳ್ಳಿ ಖರೀದಿ ಮಾಡಿದರೆ ಅಕ್ಷಯ ಪಾತ್ರಯಷ್ಟೇ ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ. ಅದಕ್ಕಾಗಿಯೇ ಇಂದು ಬಂಗಾರ ಖರೀದಿ ಮಾಡಲು ಸಾಲು ಸಾಲು ಜನ

ಚಿತ್ರದುರ್ಗ | ಮರದ ಕೊಂಬೆ ಬಿದ್ದು 24 ಗಂಟೆಯಾದರೂ ತೆರವುಗೊಳಿಸದ ನಗರಸಭೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

error: Content is protected !!