Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಭಾರತಕ್ಕೆ ಮತ್ತಷ್ಟು ಶಕ್ತಿಯನ್ನು ನೀಡಿದ್ದಾರೆ : ಎಂಕೆ ತಾಜ್ ಪೀರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮಾ. 15 : ಇಂದು ಧರ್ಮಗಳಲ್ಲಿ ವಿಷದ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಇಂತಹ ಸಮಯದಲ್ಲಿ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮಾಡುವ ಮೂಲಕ ಭಾರತಕ್ಕೆ ಮತ್ತಷ್ಟು ಶಕ್ತಿಯನ್ನು ಅವರ ಪಾದಯಾತ್ರೆ ನೀಡಿತು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂಕೆ ತಾಜ್ ಪೀರ್ ಹೇಳಿದರು.

ಪತ್ರಿಕಾ ಭವನದಲ್ಲಿ ರಾಹುಲ್ ಗಾಂಧಿ ವಿಚಾರ ಮಂಚ್‍ವತಿಯಿಂದ ನಡೆದ ಅಭಿನಂದನೆಯನ್ನು  ಸ್ವೀಕರಿಸಿ ಮಾತಾಡಿದ ಅವರು. ರಾಹುಲ್ ಗಾಂಧಿ ಅವರ ಆಲೋಚನೆಗಳು ಬಹಳಷ್ಟು ಬದಲಾಗಿವೆ. ಅವರು ಐತಿಹಾಸಿಕ ದಾಖಲೆ ಬರೆಯುವಂತ 3500 ಕಿಲೋಮೀಟರ್ ಪಾದಯಾತ್ರೆ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಪಾದಯಾತ್ರೆ ಮಾಡಿದರು.

ಇಂತಹ ಪಾದಯಾತ್ರೆಯ ಸಮಯದಲ್ಲಿ ಅಜ್ಜಿಯ ಸೌತೆಕಾಯಿ ಸ್ವೀಕರಿಸಿದ್ದರು. ಮೊಳಕಾಲ್ಮೂರಿನ ನೀರಿನ ಟ್ಯಾಂಕ್ ಮೇಲೆ ಹತ್ತಿ ರಾಷ್ಟ್ರ ಧ್ವಜ ಹಿಡಿದು ಬಾಲಕರ ಜೊತೆ ಬೆರೆತಿದ್ದನ್ನು ಸ್ಮರಿಸಿದರು.ರಾಹುಲ್ ಗಾಂಧಿ ಮಣಿಪುರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ್ ಜೋಡೋ ನ್ಯಾಯ ಯಾತ್ರೆಯ ಪಾದಯಾತ್ರೆಯನ್ನು ಮಾಡುತ್ತಿದ್ದಾರೆ. ಇದರಿಂದ ಶಾಂತಿ ನೆಲೆಸುವಂತಾಗಿದೆ. ದೇಶದಲ್ಲಿ ಶಾಂತಿ ಸೌಹಾರ್ದತೆಯ ವಾತಾವರಣ ಸೃಷ್ಠಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದರು.

ಇದೇ ಸಮಯದಲ್ಲಿ ಮಾತಾಡಿದ  ಜಿಲ್ಲಾ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಡಿಎನ್ ಮೈಲಾರಪ್ಪ, ಬಿಜೆಪಿಯ ಅನಂತ್ ಕುಮಾರ್ ಹೆಗಡೆ ಅವರ ಮೇಲೆ ಕೇಂದ್ರ ಸರ್ಕಾರ  ಕ್ರಮವನ್ನು ಜರುಗಿಸಬೇಕು ಎಂದು ಆಗ್ರಹಿಸಿದರು.

ಸಮಯದಲ್ಲಿ ಕಾಂಗ್ರೆಸ್ ಮುಖಂಡಾದ ಮುದಾಸರ್ ನವಾಜ್, ರೈತ ಮುಖಂಡ ಲಕ್ಷ್ಮಿಕಾಂತ್, ರಾಹುಲ್ ಗಾಂಧಿ ವಿಚಾರ ಮಂಚ್ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಲಿಂಗರಾಜ್, ಬಾಷ ಇತರರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment