Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ಮಾಜಿ ಸಚಿವೆ ನಾಗಮ್ಮ ಕೇಶವ ಮೂರ್ತಿ ಇನ್ನಿಲ್ಲ

---Advertisement---

ಸುದ್ದಿಒನ್, ದಾವಣಗೆರೆ, ಮಾರ್ಚ್. 16 : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಶನಿವಾರ ಸಂಜೆ ವಿಧಿವಶರಾಗಿದ್ದಾರೆ. ನಾಗಮ್ಮ ಕೇಶವಮೂರ್ತಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ನಾಗಮ್ಮ ಅವರ ನಿಧನದಿಂದ ಕುಟುಂಬಸ್ಥರು ದುಃಖದಲ್ಲಿದ್ದಾರೆ. ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ನಾಗಮ್ಮ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದವರು. ಪಕ್ಷದಲ್ಲಿ ರಾಜ್ಯ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಅಷ್ಟೇ ಅಲ್ಲ ಪ್ರಧಾನ ಕಾರ್ಯದರ್ಶಿಯಾಗಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಣೆ ಮಾಡಿದ್ದರು. ರಾಜಕೀಯ ಜೀವನ ಹೊರತು ಪಡಿಸಿ, ಸಮಾಜ ಸೇವೆಯನ್ನು ಮಾಡುತ್ತಿದ್ದರು. ಅದರಲ್ಲಿ ವನಿತಾ ಸಮಾಜ ಸಂಘ ಸೇರಿದಂತೆ ಅನೇಕ ಸಂಘ ಸಂಸ್ಥೆಗಳ ಮೂಲಕ ಹಲವು ಸಮಾಜಸೇವೆಗಳನ್ನು ಮಾಡಿದ್ದರು.

ನಾಗಮ್ಮ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವೆಯಾಗಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ, ವಿಧಾನಸಭಾಪತಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. ನಾಗಮ್ಮ ಕೇಶವ ಮೂರ್ತಿ ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದರು. ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೂ ಕನ್ನಡ ಕಡ್ಡಾಯ ಮಾಡಿದ್ದು ನಾಗಮ್ಮ ಅವರ ಕಾಲದಲ್ಲಿಯೇ. ಅಷ್ಟೇ ಅಲ್ಲ ಅವರ ಸೇವಾವಧಿಯಲ್ಲಿ ಪ್ರಾಥಮಿಕ ಶಾಲಾ ಹಂತದಲ್ಲಿ ಬಾಲಕಿಯರಿಗೆ ಶೇ. 50ರಷ್ಟು ಮೀಸಲಾತಿ ನೀಎಲು ಕ್ರಮವಹಿಸಿದ್ದರು. ರಾಜ್ಯ ಮಟ್ಟದ ಹಾಗೂ ವಲಯ ಮಟ್ಟದಲ್ಲಿ ಹತ್ತಾರು ಬೋಧಕ ಮಂಡಳಿಯ ಸಲಹೆಗಾರರಾಗಿದ್ದರು. ನಾಗಮ್ಮ ಕೇಶವಮೂರ್ತಿ ಅವರ ನಿಧನಕ್ಕೆ ರಾಜಕೀಯ ಗಣ್ಯರು, ಆಪ್ತರು ಸಂತಾಪ ಸೂಚಿಸಿದ್ದಾರೆ. ದುಃಖತಪ್ತರಾಗಿರುವ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಎಲ್ಲರೂ ಪ್ರಾರ್ಥಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...