Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭದ್ರಾ ಮೇಲ್ದಂಡೆ ಯೋಜನೆ : ಮುತ್ತಿನ ಕೊಪ್ಪ ಹಾಗೂ ಅಬ್ಬಿನಹೊಳಲು ಬಳಿ ಕಾಮಗಾರಿ ವೀಕ್ಷಿಸಿದ  ರೈತರು

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.18  : ಭದ್ರಾ ಯೋಜನೆಯನ್ನು ಶೀಘ್ರವೇ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವಿವಿಧ ಜನಪರ ಸಂಘಟನೆಗಳು 31 ದಿನಗಳ ಕಾಲ ಜಿಲ್ಲಾ ಪಂಚಾಯಿತಿ ಮುಂಭಾಗ ಧರಣಿ ನಡೆಸಿ ಕೇಂದ್ರ ಸಚಿವರ ಭರವಸೆಯಂತೆ ಧರಣಿಯನ್ನು ಹಿಂದಕ್ಕೆ ಪಡೆದ ಜಿಲ್ಲೆಯ ರೈತರು ಸೋಮವಾರ ಚಿಕ್ಕಮಗಳೂರು ಜಿಲ್ಲೆ ಮುತ್ತಿನಕೊಪ್ಪ ಪ್ಯಾಕೇಜ್-1 ಹಾಗೂ ಅಬ್ಬಿನಹೊಳಲು ಬಳಿ ಕಾಮಗಾರಿಯನ್ನು ವೀಕ್ಷಿಸಿದರು.

ಮುತ್ತಿನಕೊಪ್ಪ ಸಮೀಪ ಎರಡು ಕಡೆ ಲಿಫ್ಟ್ ಕರೆಂಟ್ ಕೆಲಸ ಇನ್ನು ಆಗಬೇಕಿದೆ. ಭದ್ರಾ ಡ್ಯಾಂಗೆ ಸಂಪರ್ಕ ಕಲ್ಪಿಸುವ ಕೆಲಸ ಅರ್ಧವಾಗಿದೆ. ಕರೆಂಟ್ ಕೆಲಸ ಇನ್ನು ಆಗುವುದು ಬಹಳಷ್ಟಿದೆ. 22 ಟವರ್‍ಗಳಲ್ಲಿ ಹತ್ತು ಕೆಲಸ ಆಗಿದೆ. ಒಂಬತ್ತು ಪೆಂಡಿಂಗ್ ಇದೆ. ಇನ್ನು ಮೂರು ಆಗಿಲ್ಲ ಎಂದು ವೀಕ್ಷಣೆಯ ನೇತೃತ್ವ ವಹಿಸಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ತಿಳಿಸಿದ್ದಾರೆ.

ಅಬ್ಬಿನಹೊಳಲು ಸಮೀಪ ಎಂಟು ವರ್ಷದಿಂದ ನಿಂತಿದ್ದ ಕಾಮಗಾರಿ ಕಳೆದ ಏಳರಿಂದ ಆರಂಭಗೊಂಡಿದೆ. ಹೆಚ್ಚಿನ ಪರಿಹಾರಕ್ಕಾಗಿ ಒತ್ತಾಯಿಸಿ ಈ ಭಾಗದ ರೈತರು ನೀರಾವರಿ ಯೋಜನೆಗೆ ಜಮೀನುಗಳನ್ನು ಕೊಟ್ಟಿರಲಿಲ್ಲ. ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಇವರುಗಳು ರೈತರ ಮನವೊಲಿಸಿದ್ದರಿಂದ ಕೆಲಸ ಶುರುವಾಗಿದೆ.

ವಿಶ್ವೇಶ್ವರಯ್ಯ ಜಲನಿಗಮ ನಿಯಮಿತ ಸಹಾಯಕ ಕಾರ್ಯಪಾಲಕ ಅಭಿಯಂತರವರ ಕಚೇರಿ ಭದ್ರಾಮೇಲ್ದಂಡೆ ಯೋಜನೆ ಉಪ ವಿಭಾಗದ ಮುಂಭಾಗ ರೈತರು ಪ್ರತಿಭಟನೆ ನಡೆಸಿ ಯೋಜನೆಗೆ ಯಾವುದೇ ತೊಡಕುಂಟಾಗದಂತೆ ಕಾಮಗಾರಿಗೆ ಚುರುಕು ನೀಡಿ ಜಿಲ್ಲೆಗೆ ನೀರು ಹರಿಸಬೇಕೆಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಡಿ.ಎಸ್.ಹಳ್ಳಿ, ಅಪ್ಪರಸನಹಳ್ಳಿ ಬಸವರಾಜ್, ಆರ್.ಬಿ.ನಿಜಲಿಂಗಪ್ಪ, ಸೇರಿದಂತೆ ಜಿಲ್ಲೆಯ ಆರು ತಾಲ್ಲೂಕಿನ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಸೇರಿದಂತೆ ನೂರ ಅರವತ್ತಕ್ಕೂ ಹೆಚ್ಚು ರೈತರು ವೀಕ್ಷಣೆಗೆ ತೆರಳಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ?

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ? ಈ ರಾಶಿಯವರಿಗೆ ವರ ಪಸಂದೇ ಆಗುತ್ತಿಲ್ಲ.   ಬುಧವಾರ- ರಾಶಿ ಭವಿಷ್ಯ ಮೇ-22,2024 ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

error: Content is protected !!