Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿ.ಸೋಮಣ್ಣ ಹಾಗೂ ಗಾಯತ್ರಿ ಸಿದ್ಧೇಶ್ವರ ಅವರು ಚಿತ್ರದುರ್ಗದ ಭೋವಿ ಗುರುಪೀಠಕ್ಕೆ ಭೇಟಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.19 :  ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ವಿ.ಸೋಮಣ್ಣ ಹಾಗೂ ದಾವಣಗೆರೆ  ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಹಾಗೂ ಕರ್ನಾಟಕ ಸರ್ಕಾರದ ಕುವೆಂಪು ಭಾಷಾ ಪ್ರಾಧಿಕಾರದ ಸದಸ್ಯರಾಗಿ ಆಯ್ಕೆಯಾದ ಕರಿಯಪ್ಪ ಮಾಳಿಗೆ ಮತ್ತು ಶಿಲ್ಪಕಲಾ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾದ ದಾವಣಗೆರೆಯ ವೈ ಕುಮಾರ ಅವರು ಚಿತ್ರದುರ್ಗ ಭೋವಿಗುರುಪೀಠಕ್ಕೆ ಭೇಟಿ ನೀಡಿದರು.

ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಕೊರಟಗೆರೆಯ ಶ್ರೀ ಕಾಶಿ ಅನ್ನಪೂರ್ಣೇಶ್ವರಿ ಮಠದ ಶ್ರೀ ಮಹಾಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ ಶ್ರೀ ಅನಿತ್ ಸಿದ್ದೇಶ್ವರ, ಶ್ರೀಮತಿ ಅಶ್ವಿನಿ ಶ್ರೀನಿವಾಸ, ತುಮಕೂರು ಭಾಜಪ ಜಿಲ್ಲಾಧ್ಯಕ್ಷ ಹನುಮಂತೇಗೌಡ, ತುಮಕೂರು ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಓಂಕಾರ ಚಿತ್ರದುರ್ಗ ಭಾಜಪ ಮುಖಂಡ ಚಂದ್ರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment