ಚಿತ್ರದುರ್ಗ. ಮಾ.20: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿನ ಬಂದೂಕು ಪರವಾನಗಿ ಪಡೆದಿರುವ ನಾಗರೀಕರ ಬಳಿಯಲ್ಲಿರುವ ಗನ್, ಪಿಸ್ತೂಲ್ ಹಾಗೂ ಎಲ್ಲಾ ವಿಧವಾದ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸಾರ್ವಜನಿಕ ಹಿತದೃಷ್ಠಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಬಂದೂಕು ಪರವಾನಗಿ ಪಡೆದಿರುವ ನಾಗರೀಕರು ತಮ್ಮ ಬಳಿ ಇರುವ ಎಸ್ಬಿಎಂಎಲ್, ಎಸ್ಬಿಬಿಎಲ್, ಡಿಬಿಬಿಎಲ್, ಡಿಬಿಎಂಎಲ್, ರಿವಾಲ್ವಾರ್ ಹಾಗೂ ಪಿಸ್ತೂಲ್ ಎಲ್ಲಾ ಇತ್ಯಾದಿ ಶಸ್ತ್ರಾಸ್ತ್ರಗಳನ್ನು ಆಮ್ರ್ಸ್ ಕಾಯ್ದೆ-1959ರ ಕಲಂ 24ಎ ಮತ್ತು 24ಬಿ ರಡಿಯಲ್ಲಿರುವಂತೆ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿರುವ ಅಧಿಕಾರಿಗಳ ವಶಕ್ಕೆ ಕೂಡಲೇ ಒಪ್ಪಿಸಬೇಕು. ಶಸ್ತ್ರಾಸ್ತ್ರಗಳನ್ನು ತಂದಿರಿಸಿದ ಪರವಾನಗಿದಾರರಿಗೆ ಸೂಕ್ತ ರಶೀದಿಯನ್ನು ನೀಡಲು ಆದೇಶಿಸಿದೆ.
ವಿನಾಯಿತಿಗೆ ಸ್ವೀಕೃತವಾಗುವ ಪ್ರಸ್ತಾವನೆಗಳನ್ನು ಸ್ಕ್ರೀನಿಂಗ್ ಕಮಿಟಿಯಲ್ಲಿ ಪರಿಶೀಲಿಸಿ, ನಿಯಮಾನುಸಾರ ವಿನಾಯಿತಿ ನೀಡಲು ಕ್ರಮವಹಿಸಲಾಗುವುದು. ಈ ಆದೇಶವು ನೀತಿ ಸಂಹಿತೆ ಮುಕ್ತಾಯವಾಗುವವರೆಗೆ ಮಾತ್ರ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











