Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಬಿಜೆಪಿ ಕಚೇರಿ ಎದುರು ಕರುನಾಡ ವಿಜಯಸೇನೆ ಕಾರ್ಯಕರ್ತರ‌ ಪ್ರತಿಭಟನೆ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.20  : ಮುಂದಿನ ತಿಂಗಳು ನಡೆಯಲಿರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಗೋವಿಂದ ಕಾರಜೋಳ ಇವರು ಚಿತ್ರದುರ್ಗ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಲಕ್ಷಣಗಳು ಕಂಡು ಬರುತ್ತಿದ್ದು, ಯಾವುದೇ ಕಾರಣಕ್ಕು ಇವರಿಗೆ ಟಿಕೇಟ್ ನೀಡಬಾರದೆಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಬಿಜೆಪಿ. ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿನ ಸಮಸ್ಯೆಗಳ ಬಗ್ಗೆ ಗೋವಿಂದ ಕಾರಜೋಳರವರಿಗೆ ಯಾವುದೇ ಅರಿವಿಲ್ಲ. ಹಾಗಾಗಿ ಇಂತಹವರು ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಬಂದರೆ ಕ್ಷೇತ್ರದ ಅಭಿವೃದ್ದಿ ಹೇಗೆ ಸಾಧ್ಯ? ಹಾಲಿ ಸಂಸದ ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ, ಮಾಜಿ ಸಂಸದ ಜನಾರ್ಧನಸ್ವಾಮಿ, ಯುವ ಮುಖಂಡ ಎಂ.ಸಿ.ರಘುಚಂದನ್ ಇವರುಗಳ ಪೈಕಿ ಯಾರಿಗಾದರೂ ಟಿಕೆಟ್ ನೀಡಲಿ. ಅದನ್ನು ಬಿಟ್ಟು ಪಕ್ಷದ ವರಿಷ್ಟರು ಗೋವಿಂದ ಕಾರಜೋಳರವರಿಗೆ ಟಿಕೇಟ್ ನೀಡಿದರೆ ಬಿಜೆಪಿ. ಇಲ್ಲಿ ಕ್ಷೇತ್ರವನ್ನು ಕಳೆದುಕೊಳ್ಳುವುದರಲ್ಲಿ ಅನುಮಾನವಿಲ್ಲ. ಹಾಗಾಗಿ ಬಿಜೆಪಿ. ನಾಯಕರುಗಳು ಗಂಭೀರವಾಗಿ ಪರಿಗಣಿಸಬೇಕೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಅಣ್ಣಪ್ಪ, ನಿಸಾರ್ ಅಹಮದ್, ಜಗದೀಶ್ ಸಿ. ಅವಿನಾಶ್, ನಾಗರಾಜ್ ಮುತ್ತು, ಪ್ರದೀಪ್, ಸಂತೋಷ್ ಎನ್. ಸುರೇಶ್, ಅಖಿಲೇಶ್, ಕಮಲಮ್ಮ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ…!

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ರೇವಣ್ಣಗೆ ಸಿಕ್ತು ಷರತ್ತು ಬದ್ಧ ಜಾಮೀನು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಮಹಿಳೆಯಿಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ರೇವಣ್ಣ ಅರೆಸ್ಟ್ ಆಗಿದ್ದು, ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಕೋರ್ಟ್ ನಲ್ಲಿ ರೇವಣ್ಣ

ತಿಪ್ಪಮ್ಮ ನಿಧನ

  ಚಿತ್ರದುರ್ಗ, ಮೇ. 13 : ನಗರದ ಜಯಲಕ್ಷ್ಮಿ ಲೇ ಔಟ್ ನ ನಿವಾಸಿ ತಿಪ್ಪಮ್ಮ ಕಾಶಿನಾಥಯ್ಯ(95) ಭಾನುವಾರ ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ಸೋಮವಾರ ಸಂಜೆ ನೆರವೇರಿತೆಂದು

error: Content is protected !!