Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿಕೆಟ್ ಕೈ ತಪ್ಪಿದ್ದು ಬೇಸರ ಇದೆ : ಕಾಂಗ್ರೆಸ್ ಸೇರುವ ಬಗ್ಗೆ ಡಿವಿ ಸದಾನಂದಗೌಡರು ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದವರು ಡಿವಿ ಸದಾನಂದ ಗೌಡರು. ಆದರೆ ಬಿಜೆಪಿ ಆ ಕ್ಷೇತ್ರವನ್ನು ಶೋಭಾ ಕರಂದ್ಲಾಜೆ ಅವರಿಗೆ ನೀಡಿತ್ತು. ಇದು ಸಹಜವಾಗಿಯೇ ಸದಾನಂದ ಗೌಡರ ಕೋಪಕ್ಕೆ ಕಾರಣವಾಗಿದೆ. ಹೀಗಾಗಿ ಪಕ್ಷ ಬದಲಿಸುತ್ತಾರೆ. ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹ ಇತ್ತು. ಇದಕ್ಕೆ ಇಂದು ಸುದ್ದಿಗೋಷ್ಠಿ ಕರೆದು ಕ್ಲಾರಿಟಿ ನೀಡಿದ್ದಾರೆ.

ಸಂಜಯನಗರದ ಮನೆಯಲ್ಲಿ ಮಾತನಾಡಿರುವ ಸದಾನಂದಗೌಡರು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು. ಅಲ್ಲದೆ ನಾನು ಪಕ್ಷ ಶುದ್ಧೀಕರಣ ಮಾಡುವತ್ತ ಗಮನ ಹರಿಸುತ್ತೇನೆ. ಟಿಕೆಟ್ ಕೈತಪ್ಪಿದ್ದರಿಂದ ನೋವಾಗಿದ್ದು ನಿಜ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಖಂಡಿತ ಪಶ್ಚಾತ್ತಾಪ ಅನುಭವಿಸುತ್ತಾರೆ. ರಾಜ್ಯದಲ್ಲಿ ಪ್ರಧಾನಿ ಮೋದಿ ಪರವಾದ ವಾತಾವರಣ ಸೃಷ್ಟಿಯಾಗಬೇಕು. ಅವರು ಪರಿವರ್ತನೆಯ ಹರಿಕಾರ. ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು’ ಎಂದಿದ್ದಾರೆ.

ಮೋದಿ ಹಾಗೂ ಬಿಜೆಪಿ ಕರ್ನಾಟಕದಲ್ಲಿ ಇರಬೇಕು. ಭ್ರಷ್ಟಾಚಾರವಾದ, ಜಾತಿವಾದ ಮುಕ್ತವಾದ ಪಕ್ಷ ಬಿಜೆಪಿ ಆಗಬೇಕು. ಶುದ್ಧೀಕರಣ ಅಭಿಯಾನಕ್ಕೆ ವೇಗ ಕೊಡುವುದಕ್ಕೆ ನನ್ನಿಂದ ಮಾತ್ರ ಸಾಧ್ಯ‌. ನಾನು ಪಕ್ಷಕ್ಕಾಗಿ‌ ಕೆಲಸ ಮಾಡಿದ ನಿಷ್ಠಾವಂತ ಕಾರ್ಯಕರ್ತ. ನಾನು ಸಿಂಗಲ್ ಮ್ಯಾನ್ ಆರ್ಮಿ ಅಲ್ಲ. ಪಕ್ಷದಲ್ಲಿಯೂ ಒಂದಷ್ಟು ಜನರು ಶುದ್ಧೀಕರಣ ಬಯಸುತ್ತಿದ್ದಾರೆ. ಪಕ್ಷದ ಜವಾಬ್ದಾರಿ ವಹಿಸಿದವರು ಸ್ವಾರ್ಥಿಗಳಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಕುಟುಂಬ, ಮಕ್ಕಳು, ಜಾತಿ ತನ್ನವರಿಗೆ ಸೀಮಿತ ಮಾಡಿದ್ದಾರೆ. ಮೋದಿಯವರ ಮೇರಾ ದೇಶ್ ಮೇರಾ ಪರಿವಾರ್ ಆಗಬೇಕು ಎಂದು ಡಿವಿ ಸದಾನಂದಗೌಡರು ಹೇಳಿದ್ದಾರೆ. ಇದೆ ವೇಳೆ ತಾನೂ ಕಾಂಗ್ರೆಸ್ ಸೇರಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊಡಗಿನಲ್ಲಿ ಬಾಲಕಿಯನ್ನು ಕೊಂದವ ಸತ್ತಿಲ್ಲ ಬದುಕಿದ್ದಾನೆ : ಪೊಲೀಸರ ಅತಿಥಿಯಾದ ಪ್ರಕಾಶ್..!

ಕೊಡಗಿನ ಸೂರ್ಲಬಿಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೀನಾರನ್ನ ಪ್ರಕಾಶ್ ಎಂಬಾತ ರುಂಡ, ಮುಂಡ ಕತ್ತರಿಸಿ ಕ್ರೂರವಾಗಿ ಹತ್ಯೆ ಮಾಡಿದ್ದ. ನಿನ್ನೆಯೇ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಆದರೆ ಇದೀಗ ಆತ ಸತ್ತಿಲ್ಲ ಬದುಕಿದ್ದಾನೆ ಎಂಬುದು ತಿಳಿದು

ರಾತ್ರಿ ಮಲಗಿದ ನಂತರ ಈ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಇದ್ದಂತೆ..!

ಸುದ್ದಿಒನ್ : ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಈ ಸಮಸ್ಯೆ ಬಂದರೆ ಸಾಕು ಇನ್ನುಳಿದ ಸಮಸ್ಯೆಗಳು ಒಂದರ ಹಿಂದೆ ಒಂದರಂತೆ ಬರುತ್ತಲೇ ಇರುತ್ತವೆ. ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಮಧುಮೇಹ ಇರುವವರಿಗೆ ಆರೋಗ್ಯದ ಸಮಸ್ಯೆ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ. ಈ ರಾಶಿಗಳಿಗೆ ಆಕಸ್ಮಿಕ ಧನ ಆಗಮನದಿಂದ ತುಂಬಾ ಖುಷಿ.   ಶನಿವಾರ ರಾಶಿ ಭವಿಷ್ಯ -ಮೇ-11,2024 ಸೂರ್ಯೋದಯ: 05:49, ಸೂರ್ಯಾಸ್ತ :

error: Content is protected !!