Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟಿಕೆಟ್ ಕೈ ತಪ್ಪಿದ್ದು ಬೇಸರ ಇದೆ : ಕಾಂಗ್ರೆಸ್ ಸೇರುವ ಬಗ್ಗೆ ಡಿವಿ ಸದಾನಂದಗೌಡರು ಹೇಳಿದ್ದೇನು..?

---Advertisement---

 

ಬೆಂಗಳೂರು: ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದವರು ಡಿವಿ ಸದಾನಂದ ಗೌಡರು. ಆದರೆ ಬಿಜೆಪಿ ಆ ಕ್ಷೇತ್ರವನ್ನು ಶೋಭಾ ಕರಂದ್ಲಾಜೆ ಅವರಿಗೆ ನೀಡಿತ್ತು. ಇದು ಸಹಜವಾಗಿಯೇ ಸದಾನಂದ ಗೌಡರ ಕೋಪಕ್ಕೆ ಕಾರಣವಾಗಿದೆ. ಹೀಗಾಗಿ ಪಕ್ಷ ಬದಲಿಸುತ್ತಾರೆ. ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹ ಇತ್ತು. ಇದಕ್ಕೆ ಇಂದು ಸುದ್ದಿಗೋಷ್ಠಿ ಕರೆದು ಕ್ಲಾರಿಟಿ ನೀಡಿದ್ದಾರೆ.

ಸಂಜಯನಗರದ ಮನೆಯಲ್ಲಿ ಮಾತನಾಡಿರುವ ಸದಾನಂದಗೌಡರು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು. ಅಲ್ಲದೆ ನಾನು ಪಕ್ಷ ಶುದ್ಧೀಕರಣ ಮಾಡುವತ್ತ ಗಮನ ಹರಿಸುತ್ತೇನೆ. ಟಿಕೆಟ್ ಕೈತಪ್ಪಿದ್ದರಿಂದ ನೋವಾಗಿದ್ದು ನಿಜ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಖಂಡಿತ ಪಶ್ಚಾತ್ತಾಪ ಅನುಭವಿಸುತ್ತಾರೆ. ರಾಜ್ಯದಲ್ಲಿ ಪ್ರಧಾನಿ ಮೋದಿ ಪರವಾದ ವಾತಾವರಣ ಸೃಷ್ಟಿಯಾಗಬೇಕು. ಅವರು ಪರಿವರ್ತನೆಯ ಹರಿಕಾರ. ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು’ ಎಂದಿದ್ದಾರೆ.

ಮೋದಿ ಹಾಗೂ ಬಿಜೆಪಿ ಕರ್ನಾಟಕದಲ್ಲಿ ಇರಬೇಕು. ಭ್ರಷ್ಟಾಚಾರವಾದ, ಜಾತಿವಾದ ಮುಕ್ತವಾದ ಪಕ್ಷ ಬಿಜೆಪಿ ಆಗಬೇಕು. ಶುದ್ಧೀಕರಣ ಅಭಿಯಾನಕ್ಕೆ ವೇಗ ಕೊಡುವುದಕ್ಕೆ ನನ್ನಿಂದ ಮಾತ್ರ ಸಾಧ್ಯ‌. ನಾನು ಪಕ್ಷಕ್ಕಾಗಿ‌ ಕೆಲಸ ಮಾಡಿದ ನಿಷ್ಠಾವಂತ ಕಾರ್ಯಕರ್ತ. ನಾನು ಸಿಂಗಲ್ ಮ್ಯಾನ್ ಆರ್ಮಿ ಅಲ್ಲ. ಪಕ್ಷದಲ್ಲಿಯೂ ಒಂದಷ್ಟು ಜನರು ಶುದ್ಧೀಕರಣ ಬಯಸುತ್ತಿದ್ದಾರೆ. ಪಕ್ಷದ ಜವಾಬ್ದಾರಿ ವಹಿಸಿದವರು ಸ್ವಾರ್ಥಿಗಳಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಕುಟುಂಬ, ಮಕ್ಕಳು, ಜಾತಿ ತನ್ನವರಿಗೆ ಸೀಮಿತ ಮಾಡಿದ್ದಾರೆ. ಮೋದಿಯವರ ಮೇರಾ ದೇಶ್ ಮೇರಾ ಪರಿವಾರ್ ಆಗಬೇಕು ಎಂದು ಡಿವಿ ಸದಾನಂದಗೌಡರು ಹೇಳಿದ್ದಾರೆ. ಇದೆ ವೇಳೆ ತಾನೂ ಕಾಂಗ್ರೆಸ್ ಸೇರಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment