Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯ ದುಗ್ಗಮ್ಮ ಜಾತ್ರೆಯಲ್ಲಿ ಬಳೆಗಳದ್ದೇ ಸದ್ದು : 1 ಕೋಟಿ ವಹಿವಾಟು

Facebook
Twitter
Telegram
WhatsApp

ದಾವಣಗೆರೆ: ಜಿಲ್ಲೆಯಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ದುಗ್ಗಮ್ಮ ಜಾತ್ರೆ ನಡೆಯಲಿದೆ. ಈ ಬಾರಿಯೂ ದುಗ್ಗಮ್ಮ ಜಾತ್ರೆಯನ್ನು ಅದ್ದೂರಿಯಾಗಿ ಮಾಡಲಾಗಿದೆ. ದುಗ್ಗಮ್ಮ ಜಾತ್ರೆ ಬರೋಬ್ಬರಿ ಒಂದು ತಿಂಗಳ ಕಾಲ ನಡೆಯಲಿದೆ. ಈ ಜಾತ್ರೆಗೆ ಸುತ್ತಮುತ್ತಲಿನ ಜನರು ಸಹ ಸೇರುತ್ತಾರೆ. ಇಲ್ಲಿ ಬಳಗಳದ್ದೇ ಸದ್ದು ಇರುತ್ತದೆ‌. ಜೊತೆಗೆ ಆದಾಯವೂ ಕಡಿಮೆ ಏನು ಇಲ್ಲ. ಬಳೆಯಿಂದಾನೇ ಒಂದು ಕೋಟಿಗೂ ಹೆಚ್ಚು ವಹಿವಾಟು ಮಾಡಿಕೊಳ್ಳಲಾಗಿದೆ.

 

ಬೆಣ್ಣೆ ನಗರಿ ದಾವಣಗೆರೆಯ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೂ ಬಳಗಳಿಂದಾನೇ ಸಿಂಗಾರ ಮಾಡಲಾಗಿದೆ. ಬಳೆಗಳೆ ಈ ಜಾತ್ರೆಯ ವಿಶೇಷವಾಗಿದೆ. ಬಳೆಗಳನ್ನು ಮಾರಾಟ ಮಾಡಿಯೇ ಇಲ್ಲಿನ ಬಳೆಗಾರರು ಕೋಟಿ ಕೋಟಿ ಹಣ ದುಡಿಯುತ್ತಾರೆ. ಅಷ್ಟಕ್ಕೂ ಈ ಜಾತ್ರೆಯಲ್ಲಿ ಬಳೆಗಳನ್ನೇ ಮಾರಾಟ ಮಾಡುವುದು ಯಾಕೆ..? ಅದರ ಹಿಂದೆ ಒಂದು ಇತಿಹಾಸವೇ ಇದೆ‌.

 

ದುರ್ಗಾಂಭಿಕೆ ಮೂಲತಃ ವಿಜಯ ನಗರ ಜಿಲ್ಲೆಯ ದುಗ್ಗಾವತಿಯ ಮೂಲದವಳು. ದುಗ್ಗಾವತ್ತಿ ದುಗ್ಗಮ್ಮ ಎನ್ನುತ್ತಾರೆ. ದುಗ್ಗಾವತಿಗೆ ದಾವಣಗೆರೆ ಮೂಲದ ಬಳೆಗಾರನೊಬ್ಬ ಬಳೆ ಮಾರಾಟಕ್ಕೆ ಹೋಗುತ್ತಿದ್ದ. ಅಲ್ಲಿ ರೈತರು ಕೊಟ್ಟ ದವಸ ಧಾನ್ಯಗಳ ಚಕ್ಕಡಿಯ ಮೂಲಕ ತರುವ ಆ ಚಕ್ಕಡಿ ಮೂಲಕವೇ ಕರಿಕಲ್ಲಿನ ರೂಪದಲ್ಲಿ ಬಂದವಳು ದುಗ್ಗಮ್ಮ ಅಥವಾ ದುರ್ಗಾದೇವಿ. ಬಳೆಗಾರನ ಮೂಲಕ ಬಂದು ಇಲ್ಲಿ ಪ್ರತಿಷ್ಠಾಪನೆ ಗೊಂಡು ಖ್ಯಾತಿ ಗಳಿಸಿದ ದುಗ್ಗಮ್ಮನ ನೆನಪಿಗೆ ಬಂದವರು ಬಳೆ ಖರೀದಿ ಮಾಡಲೇ ಬೆೇಕು. ಹೀಗಾಗಿ ಜಾತ್ರೆಗೆ ಬರುವವರೆಲ್ಲಾ ತಾಯಿಯ ದರ್ಶನ ಪಡೆದು, ಪೂಜೆ ಮಾಡಿ, ಜಾತ್ರೆಯಲ್ಲಿ ಸುತ್ತುತ್ತಾರೆ. ಜಾತ್ರೆಯಲ್ಲಿ ಯಾವ ವಸ್ತುವನ್ನು ತೆಗೆದುಕೊಳ್ಳುತ್ತಾರೋ ಬಿಡುತ್ತಾರೋ ಆದರೆ ಬಳೆಯನ್ನು ಎಲ್ಲರು ಕೊಂಡು ಕೊಳ್ಳಲೇಬೇಕು ಎಂಬ ಸಂಪ್ರದಾಯವಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!