Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧಾರವಾಡ ಐಐಟಿಯಲ್ಲಿ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

Facebook
Twitter
Telegram
WhatsApp

ಧಾರವಾಡ ಐಐಟಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಐಐಟಿ ಧಾರವಾಡದಲ್ಲು ಒಟ್ಟು 1 ಯಂಗ್ ಪ್ರೊಫೆಶನಲ್- II (IT) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್ 23, 2024ರಂದು ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆನ್​​ಲೈನ್ ಮೂಲಕ ಸರ್ಜಿ ಸಲ್ಲಿಕೆ ಮಾಡಬೇಕು.

 

ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಧಾರವಾಡ ಸಂಸ್ಥೆಯಲ್ಲಿ ಯಂಗ್ ಪ್ರೊಫೆಶನಲ್- II (IT) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸರ್ಜಿ ಸಲ್ಲಿಸಲು ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಪಡೆದವರು ಅರ್ಹತೆ ಹೊಂದಿರುತ್ತಾರೆ. ಇನ್ನು ಆಯ್ಕೆಯಾದವರಿಗೆ ಮಾಸಿಕ ವೇತನ ₹35,000 ನೀಡಲಾಗುತ್ತದೆ. ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಕಂಪ್ಯೂಟರ್ ಅಪ್ಲಿಕೇಶನ್/ಇನ್ಫರ್ಮೇಶನ್ ಟೆಕ್ನಾಲಜಿ/ಕಂಪ್ಯೂಟರ್ ಸೈನ್ಸ್​/ಆರ್ಟಿಫಿಸಿಯಲ್ ಇಂಟೆಲಿಜೆನ್ಸ್​/ಆಪರೇಟಿಂಗ್ ಸಿಸ್ಟಮ್ಸ್​/ಸಾಫ್ಟ್‌​ವೇರ್ ಇಂಜಿನಿಯರಿಂಗ್/ಕಂಪ್ಯೂಟರ್ ಗ್ರಾಫಿಕ್ಸ್‌​ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕಾಗುತ್ತದೆ

 

ಅರ್ಜಿ ಸಲ್ಲಿರುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 36 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಇನ್ನು ಆಸಕ್ತ ಅಭ್ಯರ್ಥಿಗಳು ವೆಬ್-ಸೈಟ್, ಪೋರ್ಟಲ್ ಡೆವಲಪ್​ಮೆಂಟ್​ ಮತ್ತು ನಿರ್ವಹಣೆ, MySQLನಲ್ಲಿ ಅನುಭವಿಯಾಗಿರಬೇಕು. ಅಭ್ಯರ್ಥಿಗಳು Java/C++/PHP/Python ಆಧಾರಿತ ಅಪ್ಲಿಕೇಶನ್ ಡೆವಲಪ್​ಮೆಂಟ್‌​​ನಲ್ಲಿ ಅನುಭವ ಹೊಂದಿರಬೇಕಾಗುತ್ತದೆ. ಕೆಲಸದ ಅಗತ್ಯ ಇರುವವರು ಈ ಮಾಹಿತಿಯನ್ನು ಸದುಪಯೋಗ ಪಡಿಸಿಕೊಳ್ಳಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

error: Content is protected !!