Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮಹಿಳೆ ಮೇಲೆ ಹಲ್ಲೆ, ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮಕ್ಕೆ ಸಾಮಾಜಿಕ ಸಂಘರ್ಷ ಸಮಿತಿ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.23 : ನಗರದ ಹೊರವಲಯದಲ್ಲಿರುವ ರಾಜೀವ್‍ಗಾಂಧಿ ಆಶ್ರಯ ಬಡಾವಣೆ ಎರಡನೆ ಹಂತದಲ್ಲಿ ವಾಸವಾಗಿರುವ ಮಾದಿಗ ಜನಾಂಗದ 22 ವರ್ಷದ ವಿವಾಹಿತೆ ಅನಿತಾಳ ಮೇಲೆ ಇದೆ ಬಡಾವಣೆಯ ಏಳು ಜನ ಗುಂಪು ಸೇರಿಕೊಂಡು ಕಳೆದ ಹದಿನೈದರಂದು ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸಿರುವ ಸಾಮಾಜಿಕ ಸಂಘರ್ಷ ಸಮಿತಿ ತಪ್ಪಿತಸ್ಥರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ರಕ್ಷಣಾ ಇಲಾಖೆಯನ್ನು ಒತ್ತಾಯಿಸಿದೆ.

ಸದ್ದಾಂ, ಸಬೀಯಾ, ರೇಷ್ಮ, ನಗ್ಮಾ, ಅನ್ವರ್, ಯಾಸಿನ್ ಮತ್ತು ಅಕ್ರಂ ಇವರುಗಳು ಏಕಾಏಕಿ ಅನಿತಾಳ ಮನೆಗೆ ನುಗ್ಗಿ ಮನಬಂದಂತೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾತುಗಳನ್ನಾಡಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅನಿತಾ ಚೇತರಿಸಿಕೊಂಡು ದೂರು ನೀಡಲು ಪೊಲೀಸ್ ಠಾಣೆಗೆ ಹೋಗುತ್ತಿದ್ದಾಗ. ಅಡ್ಡಗಟ್ಟಿದ ಆರೋಪಿಗಳು ದೂರು ನೀಡದಂತೆ ಬೆದರಿಕೆ ಹಾಕಿದ್ದಾರೆ. ಇದನ್ನು ಕಂಡ ಚಂದ್ರು, ಮತ್ತು ಅನಿತಾಳ ಅಣ್ಣ ಮಂಜುನಾಥ್ ಹಲ್ಲೆಕೋರರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಪರಿಣಾಮ ಎಫ್.ಐ.ಆರ್. ದಾಖಲಾಗಿದ್ದರೂ ಇನ್ನು ತಪ್ಪಿತಸ್ಥರನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿರುವ ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಕೆ.ಕುಮಾರ್, ಜಿಲ್ಲಾಧ್ಯಕ್ಷ ಕಣುಮೇಶ್, ರಾಜ್ಯ ಗೌರವಾಧ್ಯಕ್ಷ ಡಿ.ದುರುಗೇಶ್, ಕಾರ್ಯಾಧ್ಯಕ್ಷ ಸಿ.ಚಿಕ್ಕಣ್ಣ, ಕಾರ್ಯದರ್ಶಿ ರಾಮುಗೋಸಾಯಿ, ಖಜಾಂಚಿ ರಾಮಲಿಂಗಪ್ಪ, ಉಪಾಧ್ಯಕ್ಷ ಡಿ.ಯಲ್ಲಪ್ಪ ಇವರುಗಳು ತಕ್ಷಣವೇ ಹಲ್ಲೆಕೋರರನ್ನು ಬಂಧಿಸಿ ಮಂಜುಳಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment