Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು | ಮಾರ್ಚ್ 24 ರಿಂದ ರಾಜ ದುರ್ಗಾಪರಮೇಶ್ವರಿ ಜಾತ್ರೆ

Facebook
Twitter
Telegram
WhatsApp

ಸುದ್ದಿಒನ್, ಹಿರಿಯೂರು, ಮಾರ್ಚ್ 23 : ನಗರದ ಐತಿಹಾಸಿಕ ಗ್ರಾಮದೇವತೆ ಶ್ರೀ ರಾಜ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ ನಾಳೆಯಿಂದ (ಮಾರ್ಚ್.24)  ಆರಂಭವಾಗಲಿದೆ.

1944ರಲ್ಲಿ ಜಾತ್ರೆ ನಡೆದಿತ್ತು.  ಇದೀಗ 80 ವರ್ಷಗಳ ನಂತರ ಬಹು ದೊಡ್ಡ ಜಾತ್ರೆ ನಡೆಯುತ್ತಿದೆ. ಜಾತ್ರೆ ನಡೆಸುವ ಬಗ್ಗೆ ಅಮ್ಮನವರು ಅಪ್ಪಣೆ ನೀಡಿದ ಬಳಿಕ ದೇವಸ್ಥಾನ ಸಮಿತಿಯವರು ಹಾಗೂ ಭಕ್ತರು ನಿರ್ಧರಿಸಿ, ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡು ಜಾತ್ರೆ ನಡೆಸುತ್ತಿದ್ದಾರೆ. ಮಾರ್ಚ್ 24 ಭಾನುವಾರದಿಂದ ಆರಂಭಗೊಂಡ ಜಾತ್ರಾ ಮಹೋತ್ಸವ  ಮಾರ್ಚ್ 27ರವರೆಗೆ  ನಾಲ್ಕು ದಿನಗಳ ಕಾಲ ನಡೆಯಲಿದೆ.

ಮಾರ್ಚ್ 24 ಬೆಳಿಗ್ಗೆ 10.30ಕ್ಕೆ ಚಪ್ಪರ ಶಾಸ್ತ್ರ, ಸಂಜೆ 7ಗಂಟೇಗೆ ಮದಲಂಗಿತ್ತಿ ಶಾಸ್ತ್ರ,
ಮಾ. 25ರಂದು 9ಗಂಟೆಗೆ ದೇವಿಯ ಮೂಲ ಕಳಸದೊಂದಿಗೆ ಗಂಗಾಪೂಜೆ, ನಡೆಮುಡಿ ಉತ್ಸವ, ಸಂಜೆ 6.15ಕ್ಕೆಪುಷ್ಪಾಲಂಕಾರದೊಂದಿಗೆ ಉಯ್ಯಾಲೋತ್ಸವ, ಮಾ. 26ರಂದು ಬೆಳಿಗ್ಗೆ 6ಕ್ಕೆ ದೇವಿಯ ಮೂಲ ಮೂರ್ತಿಗೆ ಮಹಾರುದ್ರಾಭಿಷೇಕ ಅರ್ಚನೆ, ಅಭಿಷೇಕ ಪೂಜೆ, ಬೆಳಿಗ್ಗೆ 7ಗಂಟೇಗೆ ಸುಮಂಗಲಯರಿಂದ ಮಾಡ್ಲಕ್ಕಿ ತುಂಬುವುದು ಹಾಗೂ ತಂಬಿಟ್ಟಿನ ಆರತಿ ಸೇವೆ ಹಾಗೂ ಕೊನೆಯ ದಿನ 27ರಂದು ಬೆಳಿಗ್ಗೆ 7ಗಂಟೆಯಿಂದ ಆರತಿ ಬಾನ ಮತ್ತು ದೇವಿಯ ಬೇವಿನ ಉಡಿಗೆ ಸೇವೆ ನಂತರ ರಾತ್ರಿ 8ಗಂಟೆ ಗೆ ಓಕುಳಿ ಮತ್ತು ಕಂಕಣ ವಿಸರ್ಜನೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!