Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಬಿಜೆಪಿ ಸೇರಲಿದ್ದಾರೆ ಶಾಸಕ ಗಾಲಿ ಜನಾರ್ದನ ರೆಡ್ಡಿ

---Advertisement---

ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಎಲ್ಲಾ ಪಕ್ಷಗಳು ಚುನಾವಣೆಯ ಪ್ರಚಾರದಲ್ಲಿ ಬ್ಯುಸಿಯಾಗಿವೆ. ಇದರ ನಡುವೆ ಬಿಜೆಪಿ, ಪಕ್ಷೇತರ ಅಭ್ಯರ್ಥಿ ಗಾಲಿ ಜನಾರ್ದನ ರೆಡ್ಡಿಗೆ ಗಾಳ ಹಾಕಿದೆ. ಎಲ್ಲೆಲ್ಲಿ ಗೆಲ್ಲುವ ಸಾಧ್ಯತೆ ಇದೆಯೋ ಅಲ್ಲೆಲ್ಲಾ ಹೆಚ್ಚಿನ ಪ್ರಯತ್ನ ಪಡಲಾಗುತ್ತಿದೆ. ಇದೀಗ ಪಕ್ಷೇತರವಾಗಿ ಗೆದ್ದ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಸೇರಲು ಸಮಯ ಫಿಕ್ಸ್ ಆಗಿದೆ. ನಾಳೆಯೇ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.

 

ಜನಾರ್ದನ ರೆಡ್ಡಿಯವರನ್ನು ಪಕ್ಷಕ್ಕೆ ಕರೆತರಲು ಬಿಜೆಪಿ ಹೈಕಮಾಂಡ್ ಶ್ರೀರಾಮುಲುಗೆ ಮಾತುಕತೆ ನಡೆಸಲು ತಿಳಿಸಿತ್ತು. ಬಳಿಕ ದೆಹಲಿಗೆ ಕರೆಸಿಕೊಂಡು ಖುದ್ದು ಅಮಿತ್ ಅವರೇ ಮಾತನಾಡಿದ್ದಾರೆ. ಅಂತಿಮ ಸುತ್ತಿನ ಮಾತುಕತೆಯೂ ನಡೆದಿದ್ದು, ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾದರ್ನ ರೆಡ್ಡಿ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಇಂದು (ಮಾರ್ಚ್ 24) ಸಂಜೆ ಬೆಂಗಳೂರಿನಲ್ಲಿ ಕರೆದಿದ್ದು, ಬಿಜೆಪಿ ಸೇರ್ಪಡೆ ಬಗ್ಗೆ ತಿಳಿಸಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಪಾರಿಜಾತ ಅಪಾರ್ಟ್ಮೆಂಟ್ ನಲ್ಲಿ  ಕೆಆರ್‌ಪಿಪಿ ಪಕ್ಷದ ಮುಖಂಡರ ಜತೆ ಸಭೆ ನಡೆಯಲಿದ್ದು, ಸಭೆ ಬಳಿಕ ಸಂಜೆ 5 ಗಂಟೆಗೆ ರೆಡ್ಡಿ ತಮ್ಮ ನಿರ್ಧಾರವನ್ನು ಬಹಿರಂಗಪಡಿಸಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಆಹ್ವಾನದ ಮೇರೆಗೆ ಕೆಲವು ದಿನಗಳ ಹಿಂದೆ ದೆಹಲಿಗೆ ತೆರಳಿದ್ದರು. ಅಲ್ಲಿ ಶಾ ಅವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದಲ್ಲಿ ಬಗ್ಗೆ ಮಾತುಕತೆ ನಡೆಸಿದ್ದರು. ಈ ವೇಳೆ ಬಿಜೆಪಿಗೆ ಸೇರುವಂತೆ ರೆಡ್ಡಿಗೆ ಆಹ್ವಾನ ನೀಡಿದ್ದಾರೆ. ಅಲ್ಲದೇ ಕೆಆರ್​ಪಿಪಿ ಪಕ್ಷವನ್ನು ವಿಲೀನಗೊಳಿಸುವಂತೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...