Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಿಜೆಪಿಯಿಂದ ಐದನೇ ಪಟ್ಟಿ ರಿಲೀಸ್ : ಚಿತ್ರದುರ್ಗ ಪೆಂಡಿಂಗ್ : ಅನಂತ್ ಕುಮಾರ್ ಹೆಗ್ಡೆಗೆ ಟಿಕೆಟ್ ಮಿಸ್ ಆಗಿದ್ದು ಯಾಕೆ..?

---Advertisement---

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯವನ್ನು ಈಗಾಗಲೇ ರಾಜಕೀಯ ಪಕ್ಷಗಳು ಆರಂಭಿಸಿವೆ. ಇದರ ಜೊತೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡುತ್ತಲೆ ಇದೆ. ಬಿಜೆಪಿ ಇಂದು ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜಗದೀಶ್ ಶೆಟ್ಟರ್ ಗೆ ಅಂದುಕೊಂಡಂತೆ ಟಿಕೆಟ್ ನೀಡಿದೆ. ಉಳಿದಂತೆ ಚಿತ್ರದುರ್ಗವನ್ನು ಅದ್ಯಾಕೋ ಪೆಂಡಿಂಗ್ ನಲ್ಲಿಯೇ ಇಟ್ಟಿದೆ.

 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಶೆಟ್ಟರ್, ಅಲ್ಲಿಯೂ ಸೋತಿದ್ದರು. ಮತ್ತೆ ಬಿಜೆಪಿಯ ಹೈಕಮಾಂಡ್ ಮಾತಿಗೆ ಕಟ್ಟು ಬಿದ್ದು ಬಿಜೆಪಿ ವಾಪಾಸ್ ಆದರು. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆಯನ್ನು ನೀಡಿ, ಶೆಟ್ಟರ್ ಅವರನ್ನು ವಾಪಾಸ್ ಕರೆತರಲಾಗಿತ್ತು. ಅದರಂತೆ ಇದೀಗ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಟಿಕೆಟ್ ಸಿಕ್ಕಿದೆ. ಟಿಕೆಟ್ ಸಿಕ್ಕ ಖುಷಿಯಲ್ಲಿ ಶೆಟ್ಟರ್, ಟಿಕೆಟ್ ಕೊಡುವುದರ ಮೂಲಕ ಬೆಳಗಾವಿ ಕ್ಷೇತ್ರದಲ್ಲಿ ಹೆಚ್ಚಿನ ಸೇವೆ ಮಾಡಲು ಒಂದು ಅವಕಾಶ ಕೊಟ್ಟಿದ್ದಾರೆ. ಪ್ರಧಾನಿ‌ ಮೋದಿ, ಜೆಪಿ ನಡ್ಡಾ ಮತ್ತು ಅಮಿತ್ ಶಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ಬಿಎಸ್ವೈ ಹಾಗೂ ಪುತ್ರ ವಿಜಯೇಂದ್ರಗೂ ಧನ್ಯವಾದ ತಿಳಿಸಿದ್ದಾರೆ.

 

ಇನ್ನು ಈ ಬಾರಿ ಹಿಂದೂ ಫೈಯರ್ ಬ್ರಾಂಡ್ ಅಂತಾನೇ ಗುರುತಿಸಿಕೊಂಡಿರುವ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನೀಡದೆ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ. ಅನಂತ್ ಕುಮಾರ್ ಹೆಗಡೆ ಅವರ ಸಾಲು ಸಾಲು ತಪ್ಪುಗಳೇ ಅವರಿಗೆ ಟಿಕೆಟ್ ಮಿಸ್ ಆಗಲು ಕಾರಣ ಎನ್ನಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಡಾ.ಕೆ ಸುಧಾಕರ್ ಅವರಿಗೆ ಟಿಕೆಟ್ ನೀಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...