ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಮಾರ್ಚ್.25: ಅನಧಿಕೃತವಾಗಿ ಸಾಗಟ ಮಾಡುತ್ತಿದ್ದ 150 ಕ್ವಿಂಟಲ್ ಅನ್ನಭಾಗ್ಯ ಅಕ್ಕಿಯನ್ನು ಹೊಳಲ್ಕೆರೆ ಮಲಾಡಿಹಳ್ಳಿ ಬಳಿ ಶನಿವಾರ ವಶ ಪಡೆಯಲಾಗಿದೆ.
ಕೆ.ಎ.17 ಎ.ಎ.2952 ಲಾರಿಯಲ್ಲಿ ಶಿವಮೊಗ್ಗ ರಸ್ತೆಯಿಂದ ಅಕ್ರಮವಾಗಿ ಸಾರ್ವಜನಿಕ ಪಡಿತರ ವಿತರಣೆಯಲ್ಲಿ ನೀಡುವ ಅನ್ನಭಾಗ್ಯ ಅಕ್ಕಿ ಸಾಗಣಿಕೆ ಮಾಡಲಾಗುತ್ತದೆ ಎಂಬ ಮಾಹಿತಿ ಆಧರಿಸಿ, ಹೊಳಲ್ಕೆರೆ ಪೊಲೀಸ್ ಉಪನಿರೀಕ್ಷ ಸುರೇಶ್ ಹಾಗೂ ಅವರ ತಂಡ ಲಾರಿ ಮತ್ತು 150 ಕ್ವಿಂಟಲ್ ಅಕ್ಕಿ ವಶಪಡೆದಿದೆ.
ಹೊಳಲ್ಕೆರೆ ತಹಶೀಲ್ದಾರ್ ಫಾತೀಮಾ ಬಿಬಿ ಅವರ ನಿರ್ದೇಶನದ ಅನುಸಾರ ಆಹಾರ ಶಿರಸ್ತೇದಾರ್ ಲಿಂಗರಾಜು ಸ್ಥಳಕ್ಕೆ ಭೇಟಿ ನೀಡಿ ಅಧಿಕೃತವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಅಗತ್ಯ ವಸ್ತುಗಳ ನಿಯಂತ್ರಣ ಕಾಯ್ದೆ ಕಲಂ 3 ಮತ್ತು ಚುನಾವಣೆ ಅಕ್ರಮಗಳ ತಡೆಗಟ್ಟುವ ಕಾಯ್ದೆ ಕಲಂ 7 ಅಡಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆ ಮುಂದುವರೆದಿದೆ. ಕೆ.ಎ.17 ಎ.ಎ.2952 ಲಾರಿ ಚಾಲಕ ಅಕ್ಕಿಯನ್ನು ಚನ್ನಗಿರಿ ತಾಲ್ಲೂಕಿನಿಂದ ಬೆಂಗಳೂರು ಹಾಗೂ ಮಂಡ್ಯ ನಗರಕ್ಕೆ ತೆಗೆದುಕೊಂಡು ಹೋಗುತ್ತಿರುವುದಾಗಿ ತನಿಖೆಯಲ್ಲಿ ತಿಳಿಸಿದ್ದಾನೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್