Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ತುಮಕೂರಿನಲ್ಲಿ ಮತ್ತೊಂದು ಅವಘಡ: ಹುಲಿಯೂರಮ್ಮ ಜಾತ್ರೆಯಲ್ಲಿ ಕೆಂಡ ಹಾಯುವಾಗ ಬಿದ್ದ ಅರ್ಚಕ..!

---Advertisement---

 

ತುಮಕೂರು: ದೇವರನ್ನು ಹೊತ್ತುಕೊಂಡು ಕೆಂಡ ಹಾಯುವಾಗ ಅರ್ಚಕರು ಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ನಡೆದಿದೆ. ದೇವರನ್ನು ಮಧು ಎಂಬ ಅರ್ಚಕರು ಹೊತ್ತುಕಿಂಡು ಕೆಂಡ ಹಾಯುವುದಕ್ಕೆ ಹೊರಟಿದ್ದರು. ಆದರೆ ಕಾಲು ಜಾರಿ ಕೊಂಡಕ್ಕೆ ಬಿದ್ದಿದ್ದಾರೆ. ಅರ್ಚಕ ಮಧುನನ್ನು ಸದ್ಯ ಕುಣಿಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದಲ್ಲಿ ಹುಲಿಯೂರಮ್ಮದೇವು ಜಾತ್ರಾ ಮಹೋತ್ಸವ ಸಾಗಿದೆ. ಜಾತ್ರೆಯಲ್ಲಿ ಬೆಂಕಿ ಕೆಂಡ ಹಾಯುವ ಸಂಒ್ರದಾಯವಿದೆ. ಕೆಂಡ ಹಾಕಿದಾಗ ಮೊದಲು ಅರ್ಚಕರು ಹಾದು ಹೋಗುತ್ತಾರೆ. ಬಳಿಕ ಭಕ್ತಾಧಿಗಳು ಕೊಂಡ ಹಾಯುವ ಸಂಪ್ರದಾಯ ಜಾತ್ರಗಳಲ್ಲಿ ಇದೆ. ಅದರಂತೆ ಹುಲಿಯೂರಮ್ಮ ಜಾತ್ರೆಯಲ್ಲಿ ಅರ್ಚಕ ಮಧು ದೇವರನ್ನು ಹೊತ್ತು ಕೆಂಡ ಹಾಯುವುದಕ್ಕೆ ಹೋದಾಗ ಕಾಲು ಜಾರಿ ಬಿದ್ದಿದ್ದಾರೆ.

ಕೆಂಡ ಹಾಯುವಾಗಲೇ ದೇವರ ಮೂರ್ತಿಯನ್ನು ಕೆಳಗೆ ಬೀಳಿಸಲಾಗಿದೆ‌. ಮಧುಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಕೆಂಡದಿಂದ ಮೇಲಕ್ಕೆ ಎತ್ತಿ, ಆಸ್ಪತ್ರೆಗೆ ಸೇರಿಸಲಾಗಿದೆ. ಇದೆ ವೇಳೆ ದೇವರ ಮೂರ್ತಿಯನ್ನು ಕೆಂಡದಿಂದ ಮೇಲಕ್ಕೆ ಎತ್ತಿದ್ದಾರೆ. ನಿನ್ನೆಯಷ್ಟೇ ಕುಣಿಗಲ್ ತಾಲೂಕಿನ ಕಗ್ಗೆರೆ ಗ್ರಾಮದಲ್ಲಿ ಇಂಥದ್ದೇ ಘಟನೆ ನಡೆದಿತ್ತು.

ಗ್ರಾಮದಲ್ಲಿ ದಂಡಿನಮಾರಮ್ಮ ಜಾತ್ರಾ ಮಹೋತ್ಸವ ನೆರವೇರಿತ್ತು. ಈ ಜಾತ್ರೆಯಲ್ಲಿ ಬೆಂಕಿಕೊಂಡ ಹಾಯುವಾಗ ಅರ್ಚಕ ವೆಂಕಟಪ್ಪ ಅವರು ಕೆಂಡದ ಮೇಲೆ ಓಡುತ್ತಿದ್ದಂತೆಯೇ ಮುಗ್ಗರಿಸಿ ಬಿದ್ದಿದ್ದರು. ಬಳಿಕ ಅವರ ಮಗ ಕೃಷ್ಟಮೂರ್ತಿ ಕೂಡ ಬೆಂಕಿಯ ಮೇಲೆ ಬಿದ್ದರು‌. ಸ್ಥಳೀಯರು ಅವರನ್ನು ರಕ್ಷಿಸಿದ್ದರು. ತೀವ್ರ ಸುಟ್ಟ ಗಾಯಗಳಾದ ಅರ್ಚಕರನ್ನು ಬಿಜಿಎಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಬೆನ್ನಲ್ಲೇ ಕುಣಿಗಲ್ ತಾಲೂಕಿನಲ್ಲಿಯೇ ಮತ್ತೊಂದು ಘಟನೆ ನಡೆದಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...