Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಂಗಾ ಭದ್ರಾ ನದಿಗೆ 9 ದಿನಗಳ ಕಾಲ ನೀರು ಬಿಡುಗಡೆ

Facebook
Twitter
Telegram
WhatsApp

ಶಿವಮೊಗ್ಗ: ಬೇಸಿಗೆಯ ಬಿಸಿ ಹೇಗಿದೆ ಅಂದ್ರೆ ಜನ ಕುಡಿಯುವ ನೀರಿಗೂ ಹಾಹಾಕಾರ ಅನುಭವಿಸುವಂತೆ ಆಗಿದೆ. ಜನ ಇರಲಿ ಜಾನುವಾರುಗಳಿಗೂ ಅದು ಸಮಸ್ಯೆಯೇ ಆಗಿದೆ. ನದಿಗಳು, ಡ್ಯಾಮ್ ಗಳು ಬತ್ತಿ ಹೋಗಿದೆ. ತುಂಗಾ ಭದ್ರಾ ನದಿಯಲ್ಲೂ ನೀರು ಕಡಿಮೆಯಾಗುತ್ತಿದ್ದು, ಸುತ್ತಮುತ್ತಲಿನ ಗ್ರಾಮದ ಜನ ನೀರಿನ ಬಗ್ಗೆ ಭಯ ಪಟ್ಟಿದ್ದರು. ಇದೀಗ ಒಂಭತ್ತು ದಿನಗಳ ಕಾಲ ತುಂಗಭದ್ರಾ ನದಿಗೆ ನೀರು ಬಿಡುವ ನಿರ್ಧಾರ ಮಾಡಿದೆ. ಭದ್ರಾ ಡ್ಯಾಂನಿಂದ ನೀರು ಬಿಡಲಾಗುತ್ತಿದೆ.

 

ಕರ್ನಾಟಕ ನೀರಾವರಿ ನಿಗಮ ನಿಯಮಿತ ಅಧೀಕ್ಷಕ ಇಂಜಿನಿಯರ್ ಕಚೇರಿ ಭದ್ರಾ ಯೋಜನಾ ಔಋತ್ತ ಭದ್ರಾ ನದಿ ಮೂಲಕ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ನದಿಗೆ ನೀರು ಹರಿಸಲು ವೇಳಾಪಟ್ಟಿ ಘೋಷಣೆ ಮಾಡಿದೆ. ಸದಸ್ಯ, ಕಾರ್ಯದರ್ಶಿಗಳು, ಭದ್ರಾ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿ ಹಾಗೂ ಅಧೀಕ್ಷಕ ಅಭಿಯಂತರರು, ಭದ್ರ ಯೋಜನಾ ವೃತ್ತ ಬಿ ಆರ್ ಪ್ರಾಜೆಕ್ಟ್ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ.

ಮಾರ್ಚ್ 29ರ ರಾತ್ರಿಯಿಂದ ಏಪ್ರಿಲ್ 6ರ ರಾತ್ರಿಯ ತನಕ 23,200 ಕ್ಯೂಸೆಕ್ ನೀರು ನೀರನ್ನು ಹರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. * 30/3/2024 : 3 ಸಾವಿರ ಕ್ಯೂಸೆಕ್. 31/3/2024: 3 ಸಾವಿರ ಕ್ಯುಸೆಕ್, 1/4/2024: 3 ಸಾವಿರ ಕ್ಯುಸೆಕ್, 2/4/2024: 3 ಸಾವಿರ ಕ್ಯುಸಕ್, 3/4/2024: 3 ಸಾವಿರ ಕ್ಯುಸೆಕ್, 4/4/2024 :3 ಸಾವಿರ ಕ್ಯುಸೆಕ್, 5/4/2024: 3 ಸಾವಿರ ಕ್ಯುಸೆಕ್, 6/4/2024: 2,200 ಕ್ಯುಸೆಕ್. ಈ ಸಮಯದಲ್ಲಿ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದುಗೆ ಇಳಿಸುವುದಾಗಲು ಇತ್ಯಾದಿ ಚಟುವಟಿಕೆಗಾಗಿ ನದುಗೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ‌

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!