Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಶಿವರಾಜ್ ತಂಗಡಗಿ ತಾಯಿ ಬಗ್ಗೆ ಅವಹೇಳನವಾಗಿ ಹೇಳಿಕೆ | ಸಿ.ಟಿ.ರವಿ ಕ್ಷಮೆ ಯಾಚಿಸಬೇಕು : ಚಿತ್ರದುರ್ಗ ಜಿಲ್ಲಾ ಭೋವಿ ಸಂಘ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿಯವರ ತಾಯಿಯ ಬಗ್ಗೆ ಬಿಜೆಪಿ.ಯ ಸಿ.ಟಿ. ರವಿ ಅವಹೇಳನವಾಗಿ ಮಾತನಾಡಿರುವುದು ಭೋವಿ ಸಮಾಜಕ್ಕೆ ಅತ್ಯಂತ ನೋವುಂಟು ಮಾಡಿದೆ. ಈ ಕೂಡಲೆ ಸಿ.ಟಿ.ರವಿ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಎಲ್ಲಿಗೆ ಬಂದರೂ ಘೇರಾವ್ ಮಾಡಿ ಕಪ್ಪುಬಟ್ಟೆ ಪ್ರದರ್ಶಿಸುತ್ತೇವೆಂದು ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ ಎಚ್ಚರಿಕೆ ನೀಡಿದರು.

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಹೆಣ್ಣನ್ನು ಭೂಮಾತೆ ಎಂದು ಗೌರವಿಸಲಾಗುವುದು. ರಾಜಕೀಯ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿಗಳಿರುವುದು ಸಹಜ. ಆದರೆ ಶಿವರಾಜ್ ತಂಗಡಗಿಯವರ ತಾಯಿ ಕುರಿತು ಅವಹೇಳನವಾಗಿ ಮಾತನಾಡಿರುವ ಸಿ.ಟಿ.ರವಿ ಸಂಸ್ಕøತಿ ಎಂತಹುದು ಎಂದು ತೋರಿಸುತ್ತದೆ. ಹಾಗಾಗಿ ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದರು.

ಜಿಲ್ಲಾ ಭೋವಿ ಸಂಘದ ಖಜಾಂಚಿ ಈ.ಮಂಜುನಾಥ್ ಮಾತನಾಡಿ ಶಿವರಾಜ್ ತಂಗಡಗಿ ತಾಯಿ ಬಗ್ಗೆ ಹೀನಾಯವಾದ ಮಾತುಗಳನ್ನು ಬಳಸಿರುವ ಸಿ.ಟಿ.ರವಿ ಎಲ್ಲಿಯೇ ಬರಲಿ ಅವರ ವಿರುದ್ದ ಧಿಕ್ಕಾರಗಳನ್ನು ಕೂಗಿ ಘೇರಾವ್ ಹಾಕುತ್ತೇವೆ. ಇನ್ನು ಮುಂದೆ ಯಾವ ಹೆಣ್ಣಿಗೂ ಅವಮಾನವಾಗುವ ರೀತಿಯಲ್ಲಿ ನಡೆದುಕೊಳ್ಳಬಾರದೆಂದು ಆಕ್ರೋಶ ವ್ಯಕ್ತಪಡಿಸಿದರು.

ಗೋಡೆಮನೆ ಹನುಮಂತಪ್ಪ ಮಾತನಾಡುತ್ತ ಬಿಜೆಪಿ.ಯ ಸಿ.ಟಿ.ರವಿ ನಮ್ಮ ಕಣ್ಣಿಗೆ ಎಲ್ಲಿಯೇ ಕಾಣಿಸಲಿ ಘೇರಾವ್ ಹಾಕಿ ದಿಕ್ಕಾರಗಳನ್ನು ಕೂಗುತ್ತೇವೆ. ಕ್ಷಮೆ ಕೇಳುವತನಕ ಬಿಡುವುದಿಲ್ಲ ಎಂದರು.

ಜಿಲ್ಲಾ ಭೋವಿ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಲಕ್ಷ್ಮಣ್, ದೇವರಾಜ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment