Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲ್‌ಪಿಜಿ ಬೆಲೆ ಏರಿಕೆ ಖಂಡಿಸಿ ಎಎಪಿ ಆಟೋ ಚಾಲಕರ ಪ್ರತಿಭಟನೆ

Facebook
Twitter
Telegram
WhatsApp

ಬೆಂಗಳೂರು: ಆಟೋ ರಿಕ್ಷಾಗಳಿಗೆ ಬಳಸುವ ಎಲ್‌ಪಿಜಿ ಬೆಲೆಯು ಕಳೆದ ಒಂದು ವರ್ಷದಲ್ಲಿ ಸುಮಾರು ಎರಡು ಪಟ್ಟು ಏರಿಕೆಯಾಗಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿಯ ಆಟೋ ಚಾಲಕರ ಘಟಕವು ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ಆಮ್‌ ಆದ್ಮಿ ಪಾರ್ಟಿಯ ಆಟೋ ಘಟಕದ ರಾಜ್ಯಾಧ್ಯಕ್ಷ ಅಯೂಬ್‌ ಖಾನ್‌, ಪದೇಪದೇ ಎಲ್‌ಪಿಜಿ ಬೆಲೆ ಏರಿಕೆ ಮಾಡುವ ಕೇಂದ್ರ ಸರ್ಕಾರವು ಆಟೋ ಚಾಲಕರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಲೀಟರ್‌ಗೆ 38 ರೂಪಾಯಿಯಿದ್ದ ಎಲ್‌ಪಿಜಿ ಬೆಲೆ ಈಗ 66 ರೂಪಾಯಿ ತಲುಪಿದೆ. ಅಂದರೆ, ಕೇವಲ ಒಂದು ವರ್ಷದಲ್ಲಿ 28 ರೂಪಾಯಿ ಏರಿಕೆಯಾಗಿದೆ. ಕಳೆದ ವಾರ ಒಂದೇ ಸಲ 6 ರೂಪಾಯಿ ಹೆಚ್ಚಿಸಲಾಗಿದೆ. ಪ್ರಯಾಣಿಕರು ನೀಡುವ ಹಣವು ಎಲ್‌ಪಿಜಿಗೇ ಖರ್ಚಾಗುತ್ತಿದ್ದು, ಆದಾಯವಿಲ್ಲದೇ ಚಾಲಕರ ಬದುಕು ದುಸ್ತರವಾಗಿದೆ. ಆಟೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಇಂಧನ ಬೆಲೆ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಎಲ್‌ಪಿಜಿ ಪೂರೈಸುವ ಕಂಪನಿಗಳ ಉದ್ಯಮಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಬೆಲೆ ಏರಿಕೆ ಮಾಡಲಾಗುತ್ತಿದೆ. ಈ ಸರ್ಕಾರಕ್ಕೆ ಆಟೋ ಚಾಲಕರು ಹಾಗೂ ಪ್ರಯಾಣಿಕರ ಹಿತ ಬೇಕಾಗಿಲ್ಲ. ಉದ್ಯಮಿಗಳು ಕೊಡುವ ಹಣದ ಆಸೆಗಾಗಿ ಸಾಮಾನ್ಯ ಜನರ ಜೀವನವನ್ನು ಶೋಚನೀಯ ಸ್ಥಿತಿಗೆ ತಳ್ಳಲಾಗುತ್ತಿದೆ. ಉಳ್ಳವರ ಪರವಾಗಿರುವ ಈ ಸರ್ಕಾರವನ್ನು ಆಡಳಿತದಿಂದ ಕಿತ್ತೊಗೆಯುವವರೆಗೂ ಜನಸಾಮಾನ್ಯರಿಗೆ ನೆಮ್ಮದಿ ಎಂಬುದಿಲ್ಲ ಎಂದು ಅಯೂಬ್‌ ಖಾನ್‌ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ನಗರ ಎಎಪಿ ಆಟೋ ಚಾಲಕರ ಘಟಕದ ಅಧ್ಯಕ್ಷ ವೆಂಕಟೇಗೌಡ ಮಾತನಾಡಿ, ಎಲ್‌ಪಿಜಿ ಬೆಲೆಯನ್ನು ಮನಸೋಯಿಚ್ಛೆ ಹೆಚ್ಚಿಸುತ್ತಿರುವ ನರೇಂದ್ರ ಮೋದಿಯವರ ಸರ್ಕಾರವು ದೇಶ ಕಂಡ ಅತ್ಯಂತ ಜನವಿರೋಧಿ ಸರ್ಕಾರವಾಗಿದೆ. ಸರ್ಕಾರಕ್ಕೆ ಆಟೋ ಚಾಲಕರ ಬಗ್ಗೆ ಕಾಳಜಿಯಿದ್ದರೆ ಈಗಲಾದರೂ ಬೆಲೆ ಇಳಿಕೆ ಮಾಡಲಿ ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!