Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SRH ವಿರುದ್ಧ ಮುಂಬೈ ಇಂಡಿಯನ್ ಸೋಲು: ನಾಯಕ ಕೊಟ್ಟ ಸ್ಪಷ್ಟನೆ ಏನು..?

Facebook
Twitter
Telegram
WhatsApp

 

ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಖಾಮುಖಿಯಾಗಿದ್ದವು. ಆದರೆ ನಿನ್ನೆಯ ಐಪಿಎಲ್ ರೋಚಕ ಪಂದ್ಯದಲ್ಲಿ ಮುಂಬೈ ಮಣಿಸಿ ಎಸ್ ಆರ್ ಹೆಚ್ ಭರ್ಜರಿ ಗೆಲುವು ಸಾಧಿಸಿದೆ. 31 ರನ್ ಗಳಿಂದ ಸೋಲಿಸಿದೆ. ಮೊದಲು ಬ್ಯಾಟ್ ಮಾಡಿದ ಹೈದ್ರಾಬಾದ್ ತಂಡವು 277 ರನ್ ಗಳಿಸಿತ್ತು. 277 ರನ್ ಟಾರ್ಗೆಟ್ ಬೆನ್ನತ್ತಿ ಮುಂಬೈ ಇಂಡಿಯನ್ಸ್ 246 ರನ್ ಗಳಿಸಿ ಹೀನಾಯ ಸೋಲು ಒಪ್ಪಿಕೊಂಡಿತು.

 

ಈ ಸೋಲಿಗೆ ಮುಂಬೈ ಇಂಡಿಯನ್ಸ್ ನಾಯಕ, ಹಾರ್ದಿಕ್ ಪಾಂಡ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಾವೂ ಕೆಲವು ಹೊಸ ಪ್ರಯೋಗಗಳನ್ನು ಮಾಡಿದ್ದೇವೆ. ತಪ್ಪುಗಳಿಂದ ಪಾಠ ಕಲಿಯುತ್ತಿದ್ದೇವೆ. ನಮಗೆ ಇಷ್ಟು ದೊಡ್ಡ ಟಾರ್ಗೆಟ್ ಸಿಗುತ್ತದೆ ಎಂದುಕೊಂಡಿರಲಿಲ್ಲ. ಹೈದ್ರಾಬಾದ್ ತಂಡದ ಬ್ಯಾಟಿಂಗ್ ಕೂಡ ಉತ್ತಮವಾಗಿತ್ತು. ಬೌಲಿಂಗ್ ವೇಳೆ ಹೊಸ ಪ್ರಯೋಗಗಳನ್ನು ಮಾಡಿದ್ದೇವೆ. ನಾವೂ ತಪ್ಪುಗಳಿಂದ ಕಲಿಯುತ್ತೇವೆ‌. ಸ್ವಲ್ಪ ಬದಲಾವಣೆ ಬೇಕಿದೆ. ಇಲ್ಲಿನ ಪಿಚ್ ಬ್ಯಾಟ್ಸ್ ಮನ್ ಗಳಿಗೆ ಸಹಾಕಾರಿಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

 

ಈ ಬಾರಿಯ ಐಪಿಎಲ್ ನಲ್ಲಿ ಈಗಲೇ ಮುಂಬೈ ಇಂಡಿಯನ್ಸ್ ಗೆ ಎರಡನೇ ಸೋಲಾಗಿದೆ. ಈ ಮೊದಲು ಗುಜರಾತ್ ಟೈಟಾನ್ಸ್ ವಿರುದ್ಧವೂ ಸೋಲು ಕಂಡಿತ್ತು. ಇದೀಗ ಎಸ್ ಆರ್ ಹೆಚ್ ವಿರುದ್ಧವೂ ಸೋಲು ಕಂಡಿದೆ. ಹೈದ್ರಾಬಾದ್ ಕೂಡ ಎರಡು ಪಂದ್ಯದಲ್ಲಿ ಮೊದಲ ಪಂದ್ಯ ಸೋತು, ಈಗ ಗೆದ್ದಿದೆ. ನಿನ್ನೆಯ ಮ್ಯಾಚ್ ನಲ್ಲಿ ಎಸ್ ಆರ್ ಹೆಚ್ ಗೆಲುವು ಕಂಡಿದ್ದಕ್ಕೆ ಮಾಲಕಿ ಕಾವ್ತಾ ಮಾರನ್ ಕ್ರೀಡಾಂಗಣದಲ್ಲಿಯೇ ಕುಣಿದು ಕುಪ್ಪಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ರೇವಣ್ಣಗೆ ಜೈಲಾ..? ಬೇಲಾ..?

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. 8ನೇ ತಾರೀಖಿನ ತನಕವೂ ವಶಕ್ಕೆ ಪಡೆದಿದ್ದರು. ಆದರೆ ಇಂದು ಅವರ

error: Content is protected !!