Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

SRH ವಿರುದ್ಧ ಮುಂಬೈ ಇಂಡಿಯನ್ ಸೋಲು: ನಾಯಕ ಕೊಟ್ಟ ಸ್ಪಷ್ಟನೆ ಏನು..?

---Advertisement---

 

ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಖಾಮುಖಿಯಾಗಿದ್ದವು. ಆದರೆ ನಿನ್ನೆಯ ಐಪಿಎಲ್ ರೋಚಕ ಪಂದ್ಯದಲ್ಲಿ ಮುಂಬೈ ಮಣಿಸಿ ಎಸ್ ಆರ್ ಹೆಚ್ ಭರ್ಜರಿ ಗೆಲುವು ಸಾಧಿಸಿದೆ. 31 ರನ್ ಗಳಿಂದ ಸೋಲಿಸಿದೆ. ಮೊದಲು ಬ್ಯಾಟ್ ಮಾಡಿದ ಹೈದ್ರಾಬಾದ್ ತಂಡವು 277 ರನ್ ಗಳಿಸಿತ್ತು. 277 ರನ್ ಟಾರ್ಗೆಟ್ ಬೆನ್ನತ್ತಿ ಮುಂಬೈ ಇಂಡಿಯನ್ಸ್ 246 ರನ್ ಗಳಿಸಿ ಹೀನಾಯ ಸೋಲು ಒಪ್ಪಿಕೊಂಡಿತು.

 

ಈ ಸೋಲಿಗೆ ಮುಂಬೈ ಇಂಡಿಯನ್ಸ್ ನಾಯಕ, ಹಾರ್ದಿಕ್ ಪಾಂಡ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಾವೂ ಕೆಲವು ಹೊಸ ಪ್ರಯೋಗಗಳನ್ನು ಮಾಡಿದ್ದೇವೆ. ತಪ್ಪುಗಳಿಂದ ಪಾಠ ಕಲಿಯುತ್ತಿದ್ದೇವೆ. ನಮಗೆ ಇಷ್ಟು ದೊಡ್ಡ ಟಾರ್ಗೆಟ್ ಸಿಗುತ್ತದೆ ಎಂದುಕೊಂಡಿರಲಿಲ್ಲ. ಹೈದ್ರಾಬಾದ್ ತಂಡದ ಬ್ಯಾಟಿಂಗ್ ಕೂಡ ಉತ್ತಮವಾಗಿತ್ತು. ಬೌಲಿಂಗ್ ವೇಳೆ ಹೊಸ ಪ್ರಯೋಗಗಳನ್ನು ಮಾಡಿದ್ದೇವೆ. ನಾವೂ ತಪ್ಪುಗಳಿಂದ ಕಲಿಯುತ್ತೇವೆ‌. ಸ್ವಲ್ಪ ಬದಲಾವಣೆ ಬೇಕಿದೆ. ಇಲ್ಲಿನ ಪಿಚ್ ಬ್ಯಾಟ್ಸ್ ಮನ್ ಗಳಿಗೆ ಸಹಾಕಾರಿಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

 

ಈ ಬಾರಿಯ ಐಪಿಎಲ್ ನಲ್ಲಿ ಈಗಲೇ ಮುಂಬೈ ಇಂಡಿಯನ್ಸ್ ಗೆ ಎರಡನೇ ಸೋಲಾಗಿದೆ. ಈ ಮೊದಲು ಗುಜರಾತ್ ಟೈಟಾನ್ಸ್ ವಿರುದ್ಧವೂ ಸೋಲು ಕಂಡಿತ್ತು. ಇದೀಗ ಎಸ್ ಆರ್ ಹೆಚ್ ವಿರುದ್ಧವೂ ಸೋಲು ಕಂಡಿದೆ. ಹೈದ್ರಾಬಾದ್ ಕೂಡ ಎರಡು ಪಂದ್ಯದಲ್ಲಿ ಮೊದಲ ಪಂದ್ಯ ಸೋತು, ಈಗ ಗೆದ್ದಿದೆ. ನಿನ್ನೆಯ ಮ್ಯಾಚ್ ನಲ್ಲಿ ಎಸ್ ಆರ್ ಹೆಚ್ ಗೆಲುವು ಕಂಡಿದ್ದಕ್ಕೆ ಮಾಲಕಿ ಕಾವ್ತಾ ಮಾರನ್ ಕ್ರೀಡಾಂಗಣದಲ್ಲಿಯೇ ಕುಣಿದು ಕುಪ್ಪಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...