Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಪ್ರಿಲ್ 1ರಿಂದ ಈ ಎಲ್ಲಾ ಹಣಕಾಸು ನಿಯಮಗಳು ಬದಲಾವಣೆ : ಯಾವುದೆಲ್ಲಾ ಇರುತ್ತೆ

Facebook
Twitter
Telegram
WhatsApp

ಏಪ್ರಿಲ್ ತಿಂಗಳಲ್ಲಿ ಹೊಸ ಹಣಕಾಸು ವರ್ಷ ಆರಂಭವಾಗುತ್ತದೆ. ಈ ತಿಂಗಳಲ್ಲಿ ಕೆಲವೊಂದು ವ್ಯವಹಾರಗಳು ಬದಲಾವಣೆಯಾಗುತ್ತವೆ. ಏಪ್ರಿಲ್ ಒಂದರಿಂದ ಕೆಪವೊಂದು ನಿಯಮಗಳು ಜಾರಿಗೆ ಬರಲಿವೆ. ಈ ಬದಲಾವಣೆ ಜನಸಾಮಾನ್ಯರಿಗೆ ಪೆಟ್ಟು ಬೀಳುವಂತ ಬದಲಾವಣೆಯಾಗಿರಲಿದೆ.

 

* ಫಾಸ್ಟ್ ಟ್ಯಾಗ್ ಕೆವೈಸಿಯನ್ನು ಅಪ್ಡೇಟ್ ಮಾಡಬೇಕಿದೆ. ಇದಕ್ಕೆ ಮಾರ್ಚ್ 31 ಕೊನೆಯ ದಿನವಾಗಿದೆ. ಅಪ್ಡೇಟ್ ಆಗದೆ ಹೋದಲ್ಲಿ ಬ್ಯಾಂಕ್ ಗಳು ನಿಮ್ಮ ಫಾಸ್ಟ್ ಟ್ಯಾಗ್ ಖಾತೆಯನ್ನು ಡಿಆಕ್ಟಿವೇಟ್ ಮಾಡುತ್ತವೆ. ಈ ಮೂಲಕ ಫಾಸ್ಟ್ ಟ್ಯಾಗ್ ಖಾತೆಯಲ್ಲಿ ಹಣವಿದ್ದರು ಅನುಕೂಲವಾಗುವುದಿಲ್ಲ. ನಿಮ್ಮ ನಿಮ್ಮ ಮೊಬೈಲ್ ನಲ್ಲಿಯೇ ಫಾಸ್ಟ್ ಟ್ಯಾಗ್ ಅಪ್ಡೇಟ್ ಮಾಡಿಕೊಳ್ಳಬಹುದು.

* ಎನ್ ಪಿ ಎಸ್ ವಹಿವಾಟಿನಲ್ಲೂ ಅಪ್ಡೇಟ್ ತರಲಾಗಿದೆ. ಇನ್ನು ಮುಂದೆ ಫಾಸ್ ವರ್ಡ್ ನೊಂದಿಗೆ ದೃಢೀಕರಣವನ್ನೂ ಪೂರ್ಣಗೊಳಿಸಬೇಕು. ಆಗ ಮಾತ್ರ ಲಾಗಿನ್ ಯಶಸ್ವಿಯಾಗುತ್ತದೆ. ಇದರಿಂದ ಅನಧಿಕೃತ ಎನ್‌ಪಿಎಸ್‌ ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಈ ನಿಯಮ ಏಪ್ರಿಲ್‌ 1ರಿಂದಲೇ ಜಾರಿಗೆ ಬರಲಿದೆ.

* ಏಪ್ರಿಲ್ 1ರಿಂದ ನೌಕರರ ಭವಿಷ್ಯ ನಿಧಿ ಸಂಸ್ಥೆ ಹೊಸ ನಿಯಮಗಳನ್ನು ಜಾರಿಗೆ ತರಲಿದೆ. ಹೊಸ ನಿಯಮದ ಪ್ರಕಾರ ನೀವೂ ಉದ್ಯೋಗವನ್ನು ಬದಲಾಯಿಸಿದರೆ ನಿಮ್ಮ ಹಳೆಯ ಪಿಎಫ್ ಖಾತೆಯನ್ನು ಆಟೋ ಮೋಡ್ ಗೆ ಬದಲಾಯಿಸಲಾಗುತ್ತದೆ. ಇದರಿಂದಾಗಿ ಪಿಎಫ್ ಬದಲಾಯಿಸಲು ರಿಕ್ವೆಸ್ಟ್ ಮಾಡುವ ಅಗತ್ಯವಿರುವುದಿಲ್ಲ.

* 2023-24ರ ಹಣಕಾಸು ವರ್ಷದಿಂದ ಸರ್ಕಾರ ಹಳೆಯ ತೆರಿಗೆ ಪದ್ಧತಿ ಜತೆಗೆ ಹೊಸ ಆದಾಯ ತೆರಿಗೆ ಪದ್ಧತಿಯನ್ನೂ ಸೇರಿಸಿದೆ. ಹೊಸ ಟ್ಯಾಕ್ಸ್ ರೆಜಿಮೆ ಡೀಫಾಲ್ಟ್ ಆಗಿರಲಿದೆ. ನೀವು ಈಗಾಗಲೇ ಓಲ್ಡ್ ಟ್ಯಾಕ್ಸ್ ರೆಜಿಮೆಯಲ್ಲಿಯೇ ಇದ್ದರೆ ಹೊಸ ಹಣಕಾಸು ವರ್ಷಕ್ಕೂ ಅದರಲ್ಲೇ ಮುಂದುವರಿಸಬಹುದು. ಒಂದು ವೇಳೆ ನೀವು ಓಲ್ಡ್ ಟ್ಯಾಕ್ಸ್ ರೆಜಿಮೆ ಆಯ್ಕೆ ಮಾಡಿಕೊಳ್ಳದೇ ಇದ್ದಲ್ಲಿ ಹೊಸ ತೆರಿಗೆ ಪದ್ಧತಿಯೇ ಡೀಫಾಲ್ಟ್ ಆಗಿರುತ್ತದೆ. ಒಮ್ಮೆ ನೀವು ಹೊಸ ತೆರಿಗೆ ಪದ್ಧತಿಯಲ್ಲಿ ರಿಟರ್ನ್ ಫೈಲ್ ಮಾಡಿದರೆ ಅದರಲ್ಲೇ ಮುಂದುವರಿಯಬೇಕು.

Facebook
Twitter
Telegram
WhatsApp
suddionenews

suddionenews

Leave a Comment

Top Stories

20% ಗ್ರೇಸ್ ಮಾರ್ಕ್ಸ್ ಕೊಟ್ಟರು ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಯಾಕೆ..?

ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಮಾಮೂಲಿಯಂತೆ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಕಳೆದ ಬಾರಿಗೆ ಹೋಲಿಕೆ ಮಾಡಿಕೊಂಡರೆ ಈ ಬಾರಿ ಫಲಿತಾಂಶ ತೀರಾ ಕಡಿಮೆ ಬಂದಿದೆ. ಈ ಬಾರಿ 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ

ನಿವೇದಿತಾ ಜೈನ್ ಸಾವಿನ ಬಗ್ಗೆ ಮೊದಲೇ ಎಚ್ಚರಿಸಿದ್ದರು ಆ ಮನುಷ್ಯ.. ಮನೆಯು ಸಿಗಲಿಲ್ಲ.. ನಟಿಯೂ ಉಳಿಯಲಿಲ್ಲ..!

ನಿವೇದಿತಾ ಜೈನ್ ಬದುಕಿದ್ದು ಕೇವಲ 19 ವರ್ಷ. ಆದರೆ ಹಲವು ಸಿನಿಮಾಗಳಲ್ಲಿ ನಟಿಸಿ, ಎಲ್ಲರನ್ನು ಬಿಟ್ಟು ಹೊರಟೆ ಹೋದರು. ಇಂದಿಗೂ ಅವೆ ಸಾವು ಆತ್ಮಹತ್ಯೆಯೋ, ಸಹಜ ಸಾವೋ ಎಂಬ ಪ್ರಶ್ನೆ ಕಾಡುತ್ತದೆ. ನಿವೇದಿತಾ ಜೈನ್

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : 21ನೇ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆ

ಬೆಂಗಳೂರು: ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. 76.91ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಚೆ ಬರೆದಿದ್ದಾರೆ. 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಲಿಂಗವಾರು ಒಟ್ಟಾರೆ ಫಲಿತಾಂಶ: ಬಾಲಕರು:2,87,416(65.90%) ಬಾಲಕಿಯರು’-3,43,788(81.11%) ರಾಜ್ಯದಲ್ಲಿ

error: Content is protected !!