Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೆಡಿಎಸ್ – ಬಿಜೆಪಿ ಸಮನ್ವಯ ಸಭೆಯಲ್ಲಿ ಯುವಕರದ್ದೇ ಆಕರ್ಷಣೆ : ಸಿದ್ದರಾಮಯ್ಯ ವಿರುದ್ಧ ಗುಡುಗಿದ ದೇವೇಗೌಡರು

---Advertisement---

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಒಂದಾಗಿದ್ದು ಇಂದು ಸಮನ್ವಯ ಸಭೆ ನಡೆಸಿದ್ದಾರೆ. ಈ ದೊಡ್ಡಮಟ್ಟದ ಸಭೆಯಲ್ಲಿ ಮೈತ್ರಿ ಪಕ್ಷದಲ್ಲಿ ಎಷ್ಟು ಹೊಂದಾಣಿಕೆ ಇದೆ ಎಂಬುದನ್ನು ಸಾರಿದ್ದಾರೆ. ಈ ಮೂಲಕ ಅಸಮಾಧನವನ್ನು ಶಮನ ಮಾಡಿದ್ದು, ಎದುರಾಳಿಗಳಿಗೆ ಸಂದೇಶ ರವಾನಿಸಿದ್ದಾರೆ.

ಇನ್ನು ಈ ಸಭೆಯಲ್ಲಿ ಮಾಜಿ ಪ್ರಧಾನಿ ದೇಚೇಗೌಡ, ಬಿ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದರು. ಆದರೆ ಈ ಸಭೆಯಲ್ಲಿ ಯುವಕರೇ ಹೆಚ್ಚು ಗಮನ ಸೆಳೆದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಯುವ ನಾಯಕರು ಕೈಕುಲುಕುತ್ತಾ ಒಟ್ಟಿಗೆ ಕಾಲ ಕಳೆದಿದ್ದರು.

ಇನ್ನು ಈ ವೇಳೆ ಹೆಚ್ಚು ಗಮನ ಸೆಳೆದಿದ್ದು, ನಿಖಿಲ್, ವಿಜಯೇಂದ್ರ ಹಾಗೂ ಪ್ರಜ್ವಲ್ ರೇವಣ್ಣ. ಮೂವರು ಯುವಕರು ಫೋಟೋಗೆ ಸಖತ್ ಪೋಸ್ ಕೊಟ್ಟಿರುವುದಲ್ಲದೆ, ಎರಡು ಪಕ್ಷಗಳ ಸಾಲನ್ನು ಮೂವರು ಧರಿಸಿದ್ದರು.

ಇದೆ ವೇಳೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಈ ಚುನಾವಣೆಯಲ್ಲಿ ಸಿದ್ದರಾಮಯ್ಯ ಗರ್ವಭಂಗವಾಗಬೇಕು. ಗರ್ವ ಭಂಗ ಆಗಬೇಕಾದರೆ ನಾವೆಲ್ಲರು ಒಗ್ಗಟ್ಟಾಗಿ ಹೋಗಬೇಕು. ಎರಡು ಪಕ್ಷದಲ್ಲಿ ಸಮನ್ವಯ ಸಾಧಿಸಬೇಕು. ಇದರಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪಾತ್ರ ಬಹಳ ಮುಖ್ಯವಾಗಿದೆ. ಹಿಂದೆ ಆದಂತಹ ವಿಚಾರಗಳನ್ನು ಮರೆತು ಎಲ್ಲರು ಒಂದಾಗಬೇಕು. ಕೇವಲ ಮೋದಿ ಹೆಸರು ಸಾಕಾಗುವುದಿಲ್ಲ. ಕಾರ್ಯಕರ್ತರೆಲ್ಲಾ ಸೇರಿ ಕೆಲಸ ಮಾಡಬೇಕಿದೆ.

 

ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಜೆಡಿಎಸ್ ಎಲ್ಲಿದೆ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಅಧಿಕಾರದ ಮದ ಏರಿದೆ. ಹೀಗಾಗಿ ಜೆಡಿಎಸ್ ಎಲ್ಲಿದೆ ಎಂದಿದ್ದಾರೆ. 90ರ ವಯಸ್ಸಿನಲ್ಲೂ ಜೆಡಿಎಸ್ ಎಲ್ಲಿದೆ ಅಂತಾರೆ. ಎಲ್ಲಿದೆ ಎಂಬುದನ್ನು ತೋರಿಸುವ ಸಾಮರ್ಥ್ಯ ನನಗಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment