Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

---Advertisement---

 

ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ “ರಾಜವೀರ ಮದಕರಿ ನಾಯಕ” ಎಂಬ ಐತಿಹಾಸಿಕ ನಾಟಕವನ್ನು ಹಮ್ಮಿಕೊಳ್ಳಲಾಗಿದ್ದು, ನಾಟಕ ಯಶಸ್ವಿಗೆ ಪ್ರಥಮ ಪೂಜಾ ಕಾರ್ಯವನ್ನು ಚಿತ್ರದುರ್ಗದ ಬೆಟ್ಟದ ಮೇಲಿರುವ ಶ್ರೀ ಏಕನಾಥೇಶ್ವರಿ ಅಮ್ಮನವರಿಗೆ ಹಾಗೂ ಸಂಪಿಗೆ ಸಿದ್ದೇಶ್ವರ ಸ್ವಾಮಿಗೆ ಹಾಗೂ ರಾಜಾ ಉತ್ಸವಾಂಬ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಾಯಿತು.

ಈ ವೇಳೆ ರಾಜವೀರ ಮದಕರಿ ನಾಯಕ ನಾಟಕದ ಯಶಸ್ವಿಯಾಗಲೆಂದು ಪ್ರಾರ್ಥಿಸಿ ಪಾತ್ರದಾರಿಗಳಾದ ವಿದ್ಯಾಧರ್, ಎನ್ ಶರಣಪ್ಪ, ಎಂ.ಮೂರ್ತಿ, ಬೋಸಯ್ಯ, ಕಿರಣ್ ಜೈನ್, ಮುತ್ತಯ್ಯ, ರವಿ ಸಿದ್ದಾರ್ಥ, ಮಾಲತೇಶ್ ಅರಸ್, ಸೋಮಶೇಖರ್ ರೆಡ್ಡಿ, ಶಿವಾರಾಧ್ಯ ಅವರು ದೇಗುಲಗಳಿಗೆ ತೆರಳಿ ಪೂಜೆ ನೆರವೇರಿಸಿದರು.

ನಾಟಕದ ಉಸ್ತುವಾರಿಯನ್ನು ಚಿತ್ರದುರ್ಗ ವಕೀಲ ಸಂಘದ ಅಧ್ಯಕ್ಷರಾದ ವೈ ತಿಪ್ಪೇಸ್ವಾಮಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಶ್ರೀ ಪಿ ಆರ್ ವೀರೇಶ್ ಮತ್ತು ಎಸ್ ವಿಜಯ್ ಕುಮಾರ್ ವಹಿಸಿರುತ್ತಾರೆ .ತರಬೇತುದಾರರಾದ ಮದಕರಿಪುರದ. ಹೆಚ್. ಮರಿಸ್ವಾಮಿ ಜವಾಬ್ದಾರಿ ಹೊತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment