Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | SSLC ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು‌ : ನಾಲ್ವರು ಶಿಕ್ಷಕರ ಅಮಾನತುಗೊಳಿಸಿ ಡಿಡಿಪಿಐ ಆದೇಶ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.30 : 2023-24ನೇ ಸಾಲಿನ ಎಸ್​​ಎಸ್​​ಎಲ್​ಸಿ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು ನಕಲು ಮಾಡಲು ಸಹಕರಿಸಿದ ನಾಲ್ವರು ಶಿಕ್ಷಕರ ಅಮಾನತು ಮಾಡಿ ಡಿಡಿಪಿಐ ಕೆ. ರವಿಶಂಕರ್ ರೆಡ್ಡಿ ಆದೇಶಿಸಿದ್ದಾರೆ.

ಚಳ್ಳಕೆರೆ ತಾಲೂಕಿನ

1 ) ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ರೇವಣ್ಣ,

2 ) ಗೋಸಿಕೆರೆಯ ರಾಧಾಕೃಷ್ಣ ಗ್ರಾಮಾಂತರ ಪ್ರೌಢಶಾಲೆಯ ಸಹ ಶಿಕ್ಷಕ ರಾಘವೇಂದ್ರ

3 ) ಪಿ. ಓಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಚಂದ್ರಶೇಖರ ಮತ್ತು

4) ಕೊರ್ಲಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರಕಾಶ್ ಅವರು ಅಮಾನತುಗೊಂಡ ಶಿಕ್ಷಕರು.

ಇಂದು (ಶನಿವಾರ) ಪರುಶುರಾಮಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿದ್ದು, ಇವರೆಲ್ಲರೂ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದು, ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ವಿಧ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸುತ್ತಿರುವುದು ಕಂಡು ಬಂದಿದೆ. ಹಾಗೂ ನಕಲು ಮಾಡುವುದನ್ನು ತಡೆಯದೇ ಪರೀಕ್ಷಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತೆ, ಬೇಜವಾಬ್ದಾರಿತನ ಮತ್ತು ಕರ್ತವ್ಯ ಲೋಪವೆಸಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಹ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಮಾರ್ಚ್ 30ರಂದು ನಡೆದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯ ವಿಜ್ಞಾನ ವಿಷಯದ ಪರೀಕ್ಷೆಗೆ ಒಟ್ಟು 22122 ವಿದ್ಯಾರ್ಥಿಗಳು ಹಾಜರಾಗಿದ್ದು, 310 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಜಿಲ್ಲೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆಗೆ 22432 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 22122 ವಿದ್ಯಾರ್ಥಿಗಳು ಹಾಜರಾಗಿ, 310 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...