Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | SSLC ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು‌ : ನಾಲ್ವರು ಶಿಕ್ಷಕರ ಅಮಾನತುಗೊಳಿಸಿ ಡಿಡಿಪಿಐ ಆದೇಶ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.30 : 2023-24ನೇ ಸಾಲಿನ ಎಸ್​​ಎಸ್​​ಎಲ್​ಸಿ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು ನಕಲು ಮಾಡಲು ಸಹಕರಿಸಿದ ನಾಲ್ವರು ಶಿಕ್ಷಕರ ಅಮಾನತು ಮಾಡಿ ಡಿಡಿಪಿಐ ಕೆ. ರವಿಶಂಕರ್ ರೆಡ್ಡಿ ಆದೇಶಿಸಿದ್ದಾರೆ.

ಚಳ್ಳಕೆರೆ ತಾಲೂಕಿನ

1 ) ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ರೇವಣ್ಣ,

2 ) ಗೋಸಿಕೆರೆಯ ರಾಧಾಕೃಷ್ಣ ಗ್ರಾಮಾಂತರ ಪ್ರೌಢಶಾಲೆಯ ಸಹ ಶಿಕ್ಷಕ ರಾಘವೇಂದ್ರ

3 ) ಪಿ. ಓಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಚಂದ್ರಶೇಖರ ಮತ್ತು

4) ಕೊರ್ಲಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರಕಾಶ್ ಅವರು ಅಮಾನತುಗೊಂಡ ಶಿಕ್ಷಕರು.

ಇಂದು (ಶನಿವಾರ) ಪರುಶುರಾಮಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿದ್ದು, ಇವರೆಲ್ಲರೂ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದು, ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ವಿಧ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸುತ್ತಿರುವುದು ಕಂಡು ಬಂದಿದೆ. ಹಾಗೂ ನಕಲು ಮಾಡುವುದನ್ನು ತಡೆಯದೇ ಪರೀಕ್ಷಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತೆ, ಬೇಜವಾಬ್ದಾರಿತನ ಮತ್ತು ಕರ್ತವ್ಯ ಲೋಪವೆಸಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಹ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಮಾರ್ಚ್ 30ರಂದು ನಡೆದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯ ವಿಜ್ಞಾನ ವಿಷಯದ ಪರೀಕ್ಷೆಗೆ ಒಟ್ಟು 22122 ವಿದ್ಯಾರ್ಥಿಗಳು ಹಾಜರಾಗಿದ್ದು, 310 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಜಿಲ್ಲೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆಗೆ 22432 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 22122 ವಿದ್ಯಾರ್ಥಿಗಳು ಹಾಜರಾಗಿ, 310 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!