ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ರಾಮನಗರ: ಸಿಪಿ ಯೋಗೀಶ್ವರ್ ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಸೋಲಿಸಬೇಕೆಂದು ಪಣ ತೊಟ್ಟಿದ್ದಾರೆ. ಅದರಲ್ಲು ತನ್ನ ಶತ್ರು ಎಂದೇ ಭಾವಿಸಿದ್ದ ಕುಮಾರಸ್ವಾಮಿ ಅವರು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೆ ತಡ, ಅವರನ್ನು ಭೇಟಿ ಮಾಡಿ, ಬೆಂಗಳೂರು ಗ್ರಾಮಾಂತರದ ಬಗ್ಗೆ ಚರ್ಚೆ ನಡೆಸಿದ್ದರು. ಇದೀಗ ಸಿಪಿ ಯೋಗೀಶ್ವರ್ ಪುತ್ರಿ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಈ ನಿಶಾ ಯೋಗೀಶ್ವರ್ ಪ್ರತಿಕ್ರಿಯೆ ನೀಡಿದ್ದು, ‘ನಾನು ಕಾಂಗ್ರೆಸ್ ಸೇರುವುದು ನನ್ನ ಕುಟುಂಬದವರಿಗಿಂತ ನನ್ನ ವೈಯಕ್ತಿಕ ನಿಲುವು. ಈ ಹಿಂದೆ ಕಾಂಗ್ರೆಸ್ ಸೇರುವುದಕ್ಕಾಗಿಯೇ ಹಲವು ಹಿರಿಯ ನಾಯಕರನ್ನು ಭೇಟಿ ಮಾಡಿದ್ದೆ. ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೇರ್ಪಡೆಯಾದರೆ ಮಾತ್ರ ಡಿಕೆ ಸುರೇಶ್ ಪರ ಮತಯಾಚನೆ ಮಾಡುತ್ತೀನಿ. ಲೋಕಸಭಾ ಚುನಾವಣೆಯ ನಂತರ ಸೇರ್ಪಡೆಗೊಳ್ಳುವುದಾದರೇ ಮತಯಾಚನೆ ಮಾಡುವುದಿಲ್ಲ.
ನಾನು ಚಿಕ್ಕವಯಸ್ಸಿನಿಂದಲೂ ಚನ್ನಪಟ್ಟಣದಲ್ಲಿ ಬೆಳೆದ ಮಗಳು. ಚನ್ನಪಟ್ಟಣದ ಜನರು ನನ್ನ ಕುಟುಂಬವಿದ್ದಂತೆ. ನಾನು ಕಾಂಗ್ರೆಸ್ ಸೇರುವುದು ನನ್ನ ನಿರ್ಧಾರವೇ ವಿನಃ ಕುಟುಂಬದವರ ನಿರ್ಧಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಯ ಪೈಪೋಟಿ ನಡುವೆ ರಾಮನಗರ, ಅಪ್ಪ-ಮಗಳ ಪ್ರಚಾರದ ಪೈಪೋಟಿಗೂ ಸಾಕ್ಷಿಯಾಗುತ್ತ ಅಂತ ಕಾದು ನೋಡಬೇಕಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್