Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಮೇಲೆ ಬ್ಯಾಡ್ಮಿಟನ್ ಆಟಗಾರ್ತಿ ಸೈನಾ ‌ನೆಹ್ವಾಲ್ ಕೆಂಡಾಮಂಡಲರಾಗಿದ್ದು ಯಾಕೆ ಗೊತ್ತಾ..?

Facebook
Twitter
Telegram
WhatsApp

ದಾವಣಗೆರೆ: ಚುನಾವಣಾ ಹಿನ್ನೆಲೆ ಶಾಮನೂರು ಶಿವಶಂಕರಪ್ಪನವರು ಇತ್ತಿಚೆಗೆ ಬಿಜೆಪಿ ಮಹಿಳಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ವಿರುದ್ದ ಮಾತನಾಡಿದ್ದರು. ದಾವಣಗೆರೆಯಲ್ಲಿ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಮಹಿಳಾ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರು ಅಡುಗೆ ಮಾಡಲಿಕ್ಕೆ ಲಾಯಕ್ಕು. ಆಕೆಗೆ ಸರಿಯಾಗಿ ಮಾತನಾಡಲು ಬರಲ್ಲ. ದಾವಣಗೆರೆ ಜಿಲ್ಲೆಯ ಸಮಸ್ಯೆಗಳು ಏನು ಅನ್ನೋದೇ ಆ ಅಭ್ಯರ್ಥಿಗೆ ಗೊತ್ತಿಲ್ಲ ಎಂದಿದ್ದರು. ಗಾಯತ್ರಿ ಸಿದ್ದೇಶ್ವರ್ ಅಡುಗೆ ಮಾಡುವಿದಕ್ಕಷ್ಟೇ ಲಾಯಕ್ಕು ಎಂದಿದ್ದರು. ಈ ಹೇಳಿಕೆಗೆ ಹಲವರು ಕ್ಲಾಸ್ ತೆಗೆದುಕೊಂಡಿದ್ದಾರೆ. ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಬ್ಯಾಡ್ಮಿಟನ್ ಆಟಗಾರ್ತಿ ಸೈನಾ ನೆಹ್ವಾಲ್ ಕೂಡ ಆಕ್ರೋಶ ಹೊರ ಹಾಕಿದ್ದಾರೆ.

 

ಶಾಮನೂರು ಶಿವಶಂಕರಪ್ಪ ಅವರ ಮಾತನ್ನು ಖಂಡಿಸಿರುವ ಸೈನಾ ನೆಹ್ವಾಲ್, ಕಾಂಗ್ರೆಸ್ ನಾಯಕನ ಮಾತು ಸ್ತ್ರೀ ವಿರೋಧಿಯಾಗಿದೆ. ಈ ಹೇಳಿಕೆ ಮಹಿಳಾ ಸಬಲೀಕರಣವನ್ನೇ ಅವಮಾನಿಸಿದೆ. ನಾನು ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪರ ಆಡುವಾಗ , ನನಗೆ ಆದ್ಯತೆ ನೀಡಿದೆ. ನನಗೆ ಅವಕಾಶ ಸಿಕ್ಕ ಮೇಲೆ ಭಾರತಕ್ಕಾಗಿ ಗೆಲ್ಲುವುದಕ್ಕೆ ಸಾಧ್ಯವಾಯ್ತು. ಮಹಿಳೆಯರು ದೊಡ್ಡ ಸಾಧನೆ ಮಾಡಬೇಕು ಎಂದು ಕನಸು ಕಾಣುವಾಗ, ನಾರಿ ಶಕ್ತಿಯನ್ನು ಸಂಹಾರ ಮಾಡಲಾಗುತ್ತಾ ಇದ್ಯಾ..?

ಪ್ರಧಾನಿ ನರೇಂದ್ರ ಮೋದಿ ಅಬರು ಮಹಿಳೆಯರಿಗಾಗಿ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತಂದಿದ್ದಾರೆ. ಇಂತಹ ಸಂದರ್ಭದಲ್ಲಿ ನಾರಿಬಶಕ್ತಿಗೆ ಅಪಮಾನ, ಸ್ತ್ರಿ ದ್ವೇಷಿ ಹೇಳಿಕೆ ನೀಡುವುದು ಬೇಸರದ ಸಂಗತಿಯೇ ಸರಿ ಎಂದು ಸೈನಾ ನೆಹ್ವಾಲ್ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!