Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಗೆ ಮತ್ತೊಂದು ಶಾಕ್: ಕಾಂಗ್ರೆಸ್ ಸೇರಲಿರುವ ಯುವ ಘಟಕದ ಮಾಜಿ ಅಧ್ಯಕ್ಷ ಡಾ.ಸಂದೀಪ್

Facebook
Twitter
Telegram
WhatsApp

ಬೆಂಗಳೂರು: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿರುವಂತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವವರ ಪಟ್ಟಿ ಬೆಳೆಯುತ್ತಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಡಾ.ಸಂದೀಪ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ.

ಡಾ.ಸಂದೀಪ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತುಕತೆಗಳು ನಡೆದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಪರಿಶಿಷ್ಟ ಜಾತಿಗೆ ಸೇರಿದ ಪ್ರಬಲ ನಾಯಕರಲ್ಲಿ ಒಬ್ಬರಾದ ಡಾ.ಸಂದೀಪ್ ಬಿಜೆಪಿಯಲ್ಲಿ ತಳಹಂತದಿಂದ ಹಿಡಿದು ಬಿಜೆಪಿ ಯುವ ಘಟಕದ ಅಧ್ಯಕ್ಷ ಸ್ಥಾನದವರೆಗೆ ಕ್ರಿಯಾಶೀಲವಾಗಿ ದುಡಿದು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಕಲೇಶಪುರ-ಆಲೂರು ಅಥವಾ ಆನೇಕಲ್ ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ಅವರನ್ನು ಸ್ಪರ್ಧೆಗೆ ಇಳಿಸುವುದಾಗಿ ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರು ಭರವಸೆ ನೀಡಿದ್ದರಾದರೂ ಕೊನೆಘಳಿಗೆಯಲ್ಲಿ ಟಿಕೆಟ್ ವಂಚಿತರಾಗಿದ್ದರು.

ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಕಣಕ್ಕೆ ಇಳಿಸುವುದಾಗಿ ಡಾ. ಸಂದೀಪ್ ಅವರಿಗೆ ಭರವಸೆ ನೀಡಿ ಸಮಾಧಾನ ಮಾಡಲಾಗಿತ್ತಾದರೂ, ಅಲ್ಲೂ ಸಹ ಟಿಕೆಟ್ ನೀಡಲಿಲ್ಲ‌. ಇದೀಗ ಕಾಂಗ್ರೆಸ್ ನತ್ತ ಡಾ. ಸಂದೀಪ್ ಒಲವು ತೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

IPL 2024 : ಆರ್‌ಸಿಬಿ vs ಸಿಎಸ್‌ಕೆ : ಆರ್‌ಸಿಬಿಗೆ ಉಂಟು 18 ರ ನಂಟು : ಇಂದು ಇತಿಹಾಸ ಮರುಕಳಿಸುತ್ತಾ ?

ಸುದ್ದಿಒನ್ :  IPL 2024 ನಲ್ಲಿ RCB vs CSK ನಡುವಿನ ಇಂದಿನ ಪಂದ್ಯ ಬಹಳ ಮಹತ್ವದ್ದಾಗಿದೆ. ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳ ಕಣ್ಣು ಈ ಪಂದ್ಯದ ಮೇಲಿದೆ. ಏಕೆಂದರೆ ಇಂದಿನ ಪಂದ್ಯ ನಾಕೌಟ್ ಪಂದ್ಯವಾಗಿದೆ.

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಳೆ ವರದಿ

    ಚಿತ್ರದುರ್ಗ, ಮೇ.18:  ಶುಕ್ರವಾರ ಸಂಜೆ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 42.8ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-2ರಲ್ಲಿ 9.2ಮಿ.ಮೀ, ಭರಮಸಾಗರದಲ್ಲಿ 4.4ಮಿ.ಮೀ

error: Content is protected !!