Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರು ಜನತೆಗೆ ಹೊಸ ಭರವಸೆ : ವಿ ಸೋಮಣ್ಣ ಗೆದ್ದರೆ 10 ಸಾವಿರ ಕೋಟಿ ತರ್ತಾರಂತೆ..!

Facebook
Twitter
Telegram
WhatsApp

 

ತುಮಕೂರು: ಬಿರು ಬೇಸಿಗೆಯ ನಡುವೆ ಲೋಕಸಭಾ ಚುನಾವಣೆಯ ಬಿಸಿಯೂ ಕಾವೇರಿದೆ. ಅಭ್ಯರ್ಥಿಗಳಿಂದ ಜನತೆಗೆ ಈಗ ಹೊಸ ಹೊಸ ಭರವಸೆಗಳು ಸಿಗುತ್ತಿವೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ವಿ ಸೋಮಣ್ಣ ಕಣಕ್ಕೆ ಇಳಿದಿದ್ದಾರೆ. ಪ್ರಚಾರದ ನಡುವೆ ತುಮಕೂರು ಜನತೆಗೆ ಹೊಸ ಭರವಸೆ ನೀಡಿದ್ದಾರೆ.

‘ನಾನು ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ 100 ದಿನಗಳ ಒಳಗೆ ಕೇಂದ್ರದಿಂದ ಕಲ್ಪತರು ನಾಡಿಗೆ 10 ಸಾವಿರ ಕೋಟಿ ರೂಪಾಯಿ ಅನುದಾನ ತರುತ್ತೇನೆ. ರಾಯದುರ್ಗ ರೈಲ್ವೆ ಕಾಮಗಾರಿ ಮತ್ತು ಎತ್ತಿನಹೊಳೆ ನೀರಾವರಿ ಯೋಜನೆಗೆ ಮರುಚಾಲನೆ ನೀಡುತ್ತೇನೆ. ಕೇಂದ್ರ ಸರ್ಕಾರದಿಂದ ಕೊರಟಗೆರೆ ಕ್ಷೇತ್ರಕ್ಕೆ ಹೈಟೆಕ್ ಆಸ್ಪತ್ರೆ ತಂದೇ ತರುತ್ತೇನೆ. ಇದು ಕೇವಲ ಭರವಸೆಯಲ್ಲ, ಬಡ ಜನರ ನೋವಿನ ಮನವಿ. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಲಿದ್ದೇವೆ. ಸಿದ್ದರಬೆಟ್ಟ ಮತ್ತು ಏಳು ಸುತ್ತಿನ ಕೋಟೆಯನ್ನು ಪ್ರವಾಸಿ ತಾಣವಾಗಿ ಮಾಡುತ್ತೇವೆ ಎಂದು ವಿ ಸೋಮಣ್ಣ ಭರವಸೆ ನೀಡಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಧುಸ್ವಾಮಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ವಿ ಸೋಮಣ್ಣ ಅವರಿಗೆ ಮಣೆ ಹಾಕಿದೆ. ವಿ ಸೋಮಣ್ಣ ಕೆಲ ಬೇಸರದಿಂದ ಪಕ್ಷ ಬಿಡುವ ಮುನ್ಸೂಚನೆ ನೀಡಿದ್ದರು. ಅವರ ಅಸಮಾಧಾನ ಶಮನ ಮಾಡಿದ ಹೈಕಮಾಂಡ್ ಟಿಕೆಟ್ ನೀಡಿದೆ. ಇನ್ನು ಟಿಕೆಟ್ ಅನೌನ್ಸ್ ಆಗುವುದಕ್ಕೂ ಮೊದಲೇ ವಿ ಸೋಮಣ್ಣ ತುಮಕೂರು ಕ್ಷೇತ್ರದಲ್ಲಿ ವಿ ಸೋಮಣ್ಣ ಆಕ್ಟೀವ್ ಆಗಿದ್ದರು. ಜನರ ಬಳಿ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಇದೀಗ ಟಿಕೆಟ್ ಸಿಕ್ಕಿದ್ದು, ಭರವಸೆ ನೀಡುತ್ತಾ, ಜನರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!