Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿನಿಂದ ನೂತನ ವಿದ್ಯುತ್ ದರ ಜಾರಿ

Facebook
Twitter
Telegram
WhatsApp

 

ಬೆಂಗಳೂರು: ಹೊಸ ಹಣಕಾಸು ವರ್ಷ ಇಂದಿನಿಂದ ಪ್ರಾರಂಭವಾಗಿದೆ. ಹೀಗಾಗಿ ಕೆಲವು ವ್ಯವಹಾರಗಳ ರೀತಿ-ನೀತಿಯೂ ಬದಲಾವಣೆಯಾಗಲಿದೆ. ಅದರಲ್ಲೂ ವಿದ್ಯುತ್ ವಿಚಾರವಾಗಿ ಹಣಕಾಸು ವರ್ಷದ ಆರಂಭದಲ್ಲೇ ಗುಡ್ ನ್ಯೂಸ್ ಸಿಕ್ಕಿದೆ. ವಿದ್ಯುತ್ ದರ ಕಡಿತಗೊಂಡಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವೂ ವಿದ್ಯುತ್ ದರವನ್ನು ಪರಿಷ್ಕರಣೆ ಮಾಡಿದ್ದು, ಇಂದಿನಿಂದ ನೂತನ ದರ ಜಾರಿಗೆ ಬರಲಿದೆ.

100 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 1 ರೂಪಾಯಿ 10 ಪೈಸೆಯನ್ನು ಕಡಿತ ಮಾಡುವುದಾಗಿ ತಿಳಿಸಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ ಕೆಇಆರ್ಸಿ ಆದೇಶದಲ್ಲಿ ತಿಳಿಸಲಾಗಿದೆ. ಎಲ್ಲಾ ಎಸ್ಕಾಂಗಳಲ್ಲೂ ಏಕರೂಪದ ದರ ಜಾರಿಗೆ ಬಂದಿದೆ.

ಅದರಲ್ಲೂ 15 ವರ್ಷಗಳ ಬಳಿಕ ವಿದ್ಯುತ್ ದರ ಕಡಿತವಾಗಿದೆ. ಮುಂದಿನ ತಿಂಗಳ ಬಿಲ್ ನಲ್ಲಿ ದರ ಪರಿಷ್ಕರಣೆಯಾಗಿ ಬರಲಿದೆ. ಈ ಹಿಂದೆ ಯೂನಿಟ್ ಗೆ 0-100 ವರೆಗೆ 4.75 ಪೈಸೆ ಇತ್ತು. 100ರ ಮೇಲಿನ ಬಳಕೆಯ ಪ್ರತಿ ಯುನಿಟ್ ಗೆ 7 ರೂಪಾಯಿ ಇತ್ತು. ಇಂದಿನಿಂದ 100 ಯುನಿಟ್ ಮೇಲಿನ ಬಳಕೆ ದಾರರ ಪ್ರತಿ ಯುನಿಟ್ ಗೆ 5.90 ರೂಪಾಯಿ ಮಾತ್ರ ಪಾವತಿ ಮಾಡಬೇಕು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೃಹಜ್ಯೋತಿ ಯೋಜನೆಯ ಮೂಲಕ ವಿದ್ಯುತ್ ಉಚಿತ ಅಂತ ಘೋಷಣೆ ಮಾಡಿತ್ತು. ಅದರಂತೆ ಈಗಾಗಲೇ ಕೆಲ ತಿಂಗಳಿನಿಂದ 100 ಯೂನಿಟ್ ವಿದ್ಯುತ್ ಅನ್ನು ಗೃಹಜ್ಯೋತಿ ಮೂಲಕ ಉಚಿತವಾಗಿಯೇ ನೀಡಲಾಗುತ್ತಿದೆ. ಇದೀಗ ನೂರಕ್ಕೂ ಹೆಚ್ಚು ಯೂನಿಟ್ ಬಳಕೆ ಮಾಡುವವರಿಗೆ ದರ ಕಡಿತದ ಗುಡ್ ನ್ಯೂಸ್ ಅನ್ನು ನೀಡಿದೆ ಸರ್ಕಾರ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!