Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ತವರು ಕ್ಷೇತ್ರದಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

---Advertisement---

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ತಮ್ಮ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ನಿರತರಾಗಿದ್ದಾರೆ. ಮೈಸೂರಿನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ತವರಿನಲ್ಲಿಯೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಮೈಸೂರಿನಲ್ಲಿ ತಮ್ಮ ನಿವೃತ್ತಿ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ನನಗೆ ವಯಸ್ಸಾಗುತ್ತಿದೆ. ಮುಂದಿನ ನಾಲ್ಕು ವರ್ಷಗಳ ಬಳಿಕ ವಿಧಾನಸಭಾ ಚುನಾವಣೆ ಎದುರಾಗಲಿದೆ. ನಾನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದೇನೆ ಎಂದು ತಿಳಿಸಿದ್ದಾರೆ. ಈ ಮಾತು ಸಿದ್ದರಾಮಯ್ಯ ಅವರ ಅಭಿಮಾನಿಗಳಿಗೆ ಆಘಾತ ತಂದಿದೆ.

ರಾಜಕೀಯದಿಂದ ನಿವೃತ್ತಿ ಪಡೆಯಿವುದರ ಬಗ್ಗೆ ಹಲವು ಕಾತಣಗಳನ್ನು ತಿಳಿಸಿದ್ದಾರೆ. ಅವರವರ ದೇಹಸ್ಥಿತಿ, ಆರೊಇಗ್ಯದ ಬಗ್ಗೆ ಅವರಿಗೆ ಗೊತ್ತಿರುತ್ತದೆ. ನನಗೆ ಮೊದಲಿನಂತೆ ಉತ್ಸಾಹಭರಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ನನಗೆ ಯಾವ ಆತಂಕವೂ ಇಲ್ಲ. ಆತಂಕ ಇದ್ದರೆ ಮಾತ್ರ ಟೆನ್ಶನ್ ಇರುತ್ತದೆ. ಹೀಗಾಗಿ ನಾನು ಚುನಾವಣಾ ರಾಜಕಾರಣದಿಂದ ಹಿಂದೆ ಅರಿತುವ ನಿರ್ಧಾರ ಮಾಡಿದ್ದೇನೆ ಎಂದಿದ್ದಾರೆ.

2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಸಂಪೂರ್ಣ ಸಿಎಂ ಆಗಿ ಆಡಳಿತ ನಡೆಸಿ, ದಾಖಲೆ ಬರೆದಿದ್ದರು. ಇದೀಗ ಈ ಬಾರಿಯೂ ಸಿಎಂ ಸ್ಥಾನ ಅಲಂಕರಿಸಿದ್ದಾರೆ. ಐದು ವರ್ಷಗಳ ಕಾಲ ಪೂರ್ಣ ಪ್ರಮಾಣದ ಸಿಎಂ ಆಗಿ ಮುಂದುವರೆದರೆ ಮತ್ತೊಂದು ದಾಖಲೆಯಾಗುತ್ತದೆ. ಆದರೆ ಇದರ ನಡುವೆ ಕಾಂಗ್ರೆಸ್ ನಲ್ಲಿ ಲೋಕಸಭಾ ಚುನಾವಣೆ ಬಳಿಕ ಅಥವಾ ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆಯಾಗುತ್ತೆ ಎಂಬ ಮಾತು ಕೇಳಿ ಬರುತ್ತಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರೇ ರಾಜಕೀಯ ನಿವೃತ್ತಿ ಬೇರೆ ಘೋಷಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...