Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಖರ ಬಿಸಿಲಿನಿಂದ ರಕ್ಷಣೆಗಾಗಿ ಮಾರ್ಗಸೂಚಿ ಬಿಡುಗಡೆ : ಏನು ಮಾಡಬೇಕು ? ಏನು ಮಾಡಬಾರದು ? ಇಲ್ಲಿದೆ ಮಾಹಿತಿ….!

---Advertisement---

ಚಿತ್ರದುರ್ಗ. ಏಪ್ರಿಲ್.2:  ಪ್ರಸ್ತುತ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಮಧ್ಯಾಹ್ನ 12 ಗಂಟೆಯಿಂದ ಸಂಜೆ 03 ಗಂಟೆಯವರೆಗೆ ಪ್ರಖರವಾದ ಬಿಸಿಲು ಕಂಡುಬರುತ್ತಿರುವ ಹಿನ್ನಲೆಯಲ್ಲಿ ತಾಯಂದಿರು, ವಯೋವೃದ್ದರು ಮತ್ತು ಚಿಕ್ಕ ಮಕ್ಕಳು ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರದಂತೆ, ಮನೆಯಲ್ಲಿಯೇ ಇರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್ ವಿನಂತಿಸಿದ್ದಾರೆ.

ತುರ್ತು ಸಂದರ್ಭಗಳಲ್ಲಿ ಅಥವಾ ಮನೆಯಿಂದ ಹೊರಗಡೆ ಬರಬೇಕಾದ ಅನಿರ್ವಾಯತೆ ಇದ್ದಾಗ ನೀರಿನ ಬಾಟೆಲ್ ಹಾಗೂ ಛತ್ರಿ ಮತ್ತು ಮಕ್ಕಳಿಗೆ ಆದಷ್ಟು ತಲೆಯ ಮೇಲೆ ನೀರಿನಿಂದ ಒದ್ದೆ ಮಾಡಿದ ಬಟ್ಟೆಯನ್ನು ಹಾಕುವುದಕ್ಕೆ ಆದ್ಯತೆ ನೀಡಬೇಕು. ಆದಷ್ಟು ನೆರಳಿನಲ್ಲಿ ಇರುವಂತೆ ಗಮನ ಹರಿಸಬೇಕು, ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸಿದ್ದಾರೆ.

ಹೆಚ್ಚು ನೀರು ಕುಡಿಯುವುದು:
ಬಾಯಾರಿಕೆ ಇಲ್ಲದಿದರೂ ಸಹ ಹೆಚ್ಚು ನೀರನ್ನು ಆಗಾಗ ಕುಡಿಯಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ. ಪ್ರಯಾಣ ಮಾಡುವ ಸಮಯದಲ್ಲಿ ಸಹ ಕುಡಿಯುವ ನೀರನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ. ಓಆರ್‌ಎಸ್ ಜೀವಜಲವನ್ನು ಹಾಗೂ ಮನೆಯಲ್ಲಿಯೇ ಸಿದ್ದಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮವಾಗಿದೆ.

ಪ್ರಸ್ತುತ ಋತುಮಾನದ ಹಣ್ಣುಗಳಾದ ಕಲ್ಲಂಗಡಿ, ಕರ್ಬೂಜ, ಕಿತ್ತಳೆ, ದ್ರಾಕ್ಷಿ ಅನಾನಸ್ ಹಾಗೂ ಸೌತೆಕಾಯಿ, ಎಳೆನೀರು ಕಾಯಿ ಹೆಚ್ಚು ಸೇವಿಸಬೇಕು. ತಿಳಿ ಬಿಳಿ ಬಣ್ಣದ ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ. ನಡೆಯುವಾಗ ಪಾದರಕ್ಷೆ, ಚಪ್ಪಲಿ ತಪ್ಪದೆ ಧರಿಸಬೇಕು.

ಇವುಗಳನ್ನು ಮಾಡಬಾರದು:
ಬಿಸಿಲಿನಲ್ಲಿ  ಆದಷ್ಟು ಹೊರಹೊಗುವುದನ್ನು ತಪ್ಪಿಸಿ. ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗಬಾರದು. ಮಧ್ಯಪಾನ, ಟೀ, ಕಾಫಿ, ಹೆಚ್ಚು ಸಕ್ಕರೆ ಅಂಶವುಳ್ಳ ಪದಾರ್ಥಗಳನ್ನು ಸೇವಿಸಬೇಡಿ ಇವುಗಳ ಅತಿಯಾದ ಸೇವನೆಯಿಂದ ದೇಹ ನಿರ್ಜಲೀಕರಣಗೊಳ್ಳಬಹುದು ಅಥವಾ ಹೊಟ್ಟೆ ನೋವು ಕಂಡುಬರಬಹುದು.

ಗರ್ಭಿಣಿಯರು ಆರೋಗ್ಯ ಸಮಸ್ಯೆಯಿಂದ ಬಳಲುವವರು ಮತ್ತು ನಿಗಧಿತ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವವರು ವೈದ್ಯರ ಸಲಹೆ ಮೇರೆಗೆ ಮನೆಯ ಹೊರಗಡೆ ಕೆಲಸ ಮಾಡಲು ಆದ್ಯತೆ ನೀಡಿ. ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸದೇ ಇರುವ ಅಥವಾ ಕೆರೆ, ಕುಂಟೆಗಳ ನೀರನ್ನು ನೇರವಾಗಿ ಕುಡಿಯಬೇಡಿ. ರಸ್ತೆ ಬದಿ ತೆರೆದಿಟ್ಟ ಆಹಾರ ಪದಾರ್ಥ ಮತ್ತು ಕತ್ತಿರಿಸಿಟ್ಟ ಹಣ್ಣುಗಳನ್ನು ತಿನ್ನಬಾರದು.

ಸಾಮಾನ್ಯ ಅಪಾಯದ ಚಿಹ್ನೆಗಳು:
ವಯಸ್ಕರಲ್ಲಿ ಅರೆಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು, ಸಿಡಿಮಿಡಿಗೊಳ್ಳುವುದು, ಗಾಬರಿಗೊಳ್ಳುವುದು, ಅತಿಯಾದ ತಲೆನೋವು, ಚರ್ಮವು ಬಿಸಿ ಹಾಗೂ ಕೆಂಪಾದ ಒಣಚರ್ಮ, ಆತಂಕ, ತಲೆಸುತ್ತುವಿಕೆ, ಮಾಂಸಖಂಡಗಳಲ್ಲಿ ಸುಸ್ತು ಅಥವಾ ಸೆಳೆತ, ವಾಕರಿಕೆ ಮತ್ತು ವಾಂತಿ, ಮಕ್ಕಳಲ್ಲಿ ಆಹಾರ ಸೇವಿಸಲು ನಿರಾಕರಿಸುವುದು, ಕನಿಷ್ಠ ಮೂತ್ರ ವಿಸರ್ಜನೆ, ಬಾಯಿ ಒಣಗುವಿಕೆ, ಆಲಸ್ಯ, ಮೂರ್ಛೆ ಹೋಗುವುದು, ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ ಕಂಡುಬರುತ್ತವೆ.

ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೇಸಿಗೆಯಲ್ಲಿ ಬರಬಹುದಾದ ರೋಗಗಳ ಆರೈಕೆಗಾಗಿ, ಓಆರ್‌ಎಸ್, ಐವಿ ಪ್ಲೂಯಿಡ್ಸ್ ಮತ್ತು ಜೀವರಕ್ಷಕ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ಹಾಗೂ ಆರೋಗ್ಯಾಧಿಕಾರಿಗಳು ನೀರಿನ ಗುಣಮಟ್ಟದ ಪರೀಕ್ಷೆಯನ್ನು ನಿಯಮಿತವಾಗಿ ಮಾಡುವಂತೆ ಸೂಚನೆ ನೀಡಲಾಗಿದೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರೇಣುಪ್ರಸಾದ್ ಅವರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment