Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೈಮನಸ್ಸು ದೂರ : ಚಂದ್ರಪ್ಪ ನಿವಾಸಕ್ಕೆ ಗೋವಿಂದ ಕಾರಜೋಳ ಭೇಟಿ  

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.03 : ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದೇ ಬಂಡಾಯ ಸಾರಿದ್ದ ಶಾಸಕ ಎಂ ಚಂದ್ರಪ್ಪ ಹಾಗೂ ಪುತ್ರ ರಘು ಚಂದನ್ ಇದೀಗ ಶಾಂತರಾಗಿದ್ದಾರೆ. ಬಿಎಸ್ವೈ ಹಾಗೂ ಪುತ್ರ ಬಿವೈ ವಿಜಯೇಂದ್ರ ಅವರ ಸಂಧಾನದಿಂದ ಎಲ್ಲವನ್ನು ಮರೆತು ಗೋವಿಂದ ಕಾರಜೋಳಗೆ ಬೆಂಬಲ ನೀಡಲು ಮುಂದಾಗಿದ್ದಾರೆ. ಇಂದು ಚಂದ್ರಪ್ಪ ಅವರ ನಿವಾಸಕ್ಕೆ ಗೋವಿಂದ ಕಾರಜೋಳ ಭೇಟಿ ನೀಡಿದ್ದಾರೆ. ಅಲ್ಲೇ ತಿಂಡಿ ಸವಿಯುವ ಮೂಲಕ ಮುನಿಸು ಬಿಟ್ಟು ಇಬ್ಬರು ಒಂದಾಗಿದ್ದಾರೆ.

 

ಚಂದ್ರಪ್ಪ ನಿವಾಸ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು, ಯುವಕ ರಘುಚಂದನ್‌ ಆಶಾವಾದಿ, ಈ ಕಾರಣಕ್ಕೆ ಅವರು ಪಕ್ಷಸಂಘಟನೆ, ಹೋರಾಟ ಮಾಡಿಕೊಂಡು ಟಿಕೆಟ್ ನಿರೀಕ್ಷೆ ಯಲ್ಲಿದ್ದರು. ಆದ್ರೆ ಕೇಂದ್ರ ಹಾಗೂ ರಾಜ್ಯ ನಾಯಕರು ಇದೊಂದು ಬಾರಿ ನೀವೇ ನಿಲ್ಲಿ ಅಂದ್ರು, ರಾಷ್ಟ್ರೀಯ ನಾಯಕರ ಒತ್ತಾಯದ ಮೇರೆಗೆ ನಾನು ಓಕೆ ಅಂದೆ, ನಾನು ಯಾರ ಮಾತನ್ನು ಮೀರುವುದಿಲ್ಲವೋ ಅವರಿಂದ‌ ಹೇಳಿಸಿದ್ರು, ಅದಕ್ಕೆ ನಾನು ಆಯಿತು ಸ್ವಾಮಿ ಅಂದೆ, ಚಂದ್ರಪ್ಪ ನಾನು ಒಂದೇ ತೆಟ್ಟೆಯಲ್ಲಿ ಉಂಡ ಅಣ್ಣ ತಮ್ಮಂದಿರು. ಆವೇಶದಲ್ಲಿ ಮಾತುಗಳು ಹೆಚ್ವು ಕಡಿಮೆ‌ ಆಗಿರುತ್ತೆ. ಈಗ ಚಂದ್ರಪ್ಪ ಹಾಗೂ ರಘುಚಂದನ್‌ ನಿಮ್ಮ ಚುನಾವಣೆ ನಮ್ಮದೇ ಜವಾಬ್ದಾರಿ ಅಂದಿದ್ದಾರೆ. ಮೋದಿಯವರನ್ನ ಮತ್ತೊಮ್ಮೆ ಪ್ರಧಾನಿ‌ ಮಾಡಲು ಸಂಪೂರ್ಣ ಬೆಂಬಲ ಕೊಡ್ತೀನಿ ಎಂದು ಹೇಳಿದರು.

ಮೊಳಕಾಲ್ಮೂರಲ್ಲಿ ಬಿಜೆಪಿಯಿಂದ ಮತದಾರರಿಗೆ ಹಣ ನೀಡುವ ಕುರಿತು ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅಭ್ಯರ್ಥಿ
ಅದೆಲ್ಲ ಸತ್ಯಕ್ಕೆ ದೂರವಾದ ಮಾತು, ಚುನಾವಣೆಯಲ್ಲಿ ಅಪಪ್ರಚಾರಗಳು ನಡೆಯುತ್ತೆವೆ. ಅದಕ್ಕೆ ನಾವು ಬೆಲೆ‌ ಕೊಡಬಾರದು. ನಮ್ಮ ಕಡೆ ಆ ಪದ್ಧತಿಯೇ ಇಲ್ಲ ಎಂದು ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!